ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ. ನಿರಂಕುಶ ಪ್ರಭುತ್ವ ಇದೆ ಎಂಬ ರಾಹುಲ್ ಟೀಕೆಗೆ ಪಾತ್ರಾ ತಿರುಗೇಟು ನೀಡಿದ್ದಾರೆ. ಅವರ (ರಾಹುಲ್) ಪತ್ರಿಕಾಗೋಷ್ಠಿಗಳಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿಲ್ಲ. ಆದರೆ ಪಕ್ಷದ ಕಾರ್ಯನಿರ್ವಹಣೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಕಪಿಲ್ ಸಿಬಲ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.