<p><strong>ಜಮ್ಶೆಡ್ಪುರ(ಜಾರ್ಖಂಡ್):</strong> ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಅಜೋಯ್ ಕುಮಾರ್, ‘ಮನುಸ್ಮೃತಿ ತತ್ವಗಳಿಗೆ ಬದ್ಧವಾಗಿರುವ ಬಿಜೆಪಿ ದಲಿತರನ್ನು ಅವಮಾನಿಸುತ್ತಲೇ ಬಂದಿದೆ’ ಎಂದು ಹೇಳಿದರು.</p><p>‘ರಾಜ್ಯಸಭೆಯಲ್ಲಿ ಅಮಿತ್ ಶಾ ಅವರ ಹೇಳಿಕೆಯಿಂದ ಮನುಸ್ಮೃತಿ ಪಾಲಿಸುವ ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ’ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>‘ದಲಿತ ವಿರೋಧಿ ಧೋರಣೆ ಹೊಂದಿರುವ ಬಿಜೆಪಿಯು ಜಾತಿ ಆಧಾರಿತ ಗಣತಿಯನ್ನು ವಿರೋಧಿಸುತ್ತಿದೆ’ ಎಂದೂ ಆರೋಪಿಸಿದ್ದಾರೆ.</p><p>‘ಬಿಜೆಪಿಯ ದಲಿತ ವಿರೋಧಿ ಧೋರಣೆ ಮುನ್ನೆಲೆಗೆ ಬಂದಿದ್ದು ಇದೇ ಮೊದಲಲ್ಲ... ಹಿಂದೆ ಹಲವು ನಿದರ್ಶನಗಳಿಗೆ. ಕಾಂಗ್ರೆಸ್ ಪಕ್ಷ ದಲಿತರನ್ನು ಗೌರವಿಸುತ್ತಾ ಬಂದಿದೆ’ ಎಂದಿದ್ದಾರೆ.</p><p>ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ತಮ್ಮ ಹೇಳಿಕೆಗೆ ದೇಶ ಮುಂದೆ ಕ್ಷಮೆಯಾಚಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಶೆಡ್ಪುರ(ಜಾರ್ಖಂಡ್):</strong> ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಅಜೋಯ್ ಕುಮಾರ್, ‘ಮನುಸ್ಮೃತಿ ತತ್ವಗಳಿಗೆ ಬದ್ಧವಾಗಿರುವ ಬಿಜೆಪಿ ದಲಿತರನ್ನು ಅವಮಾನಿಸುತ್ತಲೇ ಬಂದಿದೆ’ ಎಂದು ಹೇಳಿದರು.</p><p>‘ರಾಜ್ಯಸಭೆಯಲ್ಲಿ ಅಮಿತ್ ಶಾ ಅವರ ಹೇಳಿಕೆಯಿಂದ ಮನುಸ್ಮೃತಿ ಪಾಲಿಸುವ ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ’ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p>‘ದಲಿತ ವಿರೋಧಿ ಧೋರಣೆ ಹೊಂದಿರುವ ಬಿಜೆಪಿಯು ಜಾತಿ ಆಧಾರಿತ ಗಣತಿಯನ್ನು ವಿರೋಧಿಸುತ್ತಿದೆ’ ಎಂದೂ ಆರೋಪಿಸಿದ್ದಾರೆ.</p><p>‘ಬಿಜೆಪಿಯ ದಲಿತ ವಿರೋಧಿ ಧೋರಣೆ ಮುನ್ನೆಲೆಗೆ ಬಂದಿದ್ದು ಇದೇ ಮೊದಲಲ್ಲ... ಹಿಂದೆ ಹಲವು ನಿದರ್ಶನಗಳಿಗೆ. ಕಾಂಗ್ರೆಸ್ ಪಕ್ಷ ದಲಿತರನ್ನು ಗೌರವಿಸುತ್ತಾ ಬಂದಿದೆ’ ಎಂದಿದ್ದಾರೆ.</p><p>ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ತಮ್ಮ ಹೇಳಿಕೆಗೆ ದೇಶ ಮುಂದೆ ಕ್ಷಮೆಯಾಚಿಸಬೇಕು ಎಂದು ಇದೇ ವೇಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>