<p><strong>ಚೆನ್ನೈ</strong>: 2026 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ–ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯ್ಯುವುದೇ ನಮ್ಮ ಮೈತ್ರಿಯ ಅಂತಿಮ ಗುರಿ ಎಂದು ತಮಿಳುನಾಡು ಬಿಜೆಪಿ ಘಟಕದ ನೂತನ ಅಧ್ಯಕ್ಷ ನೈನಾರ್ ನಾಗೇಂದ್ರನ್ ಗುಡುಗಿದ್ದಾರೆ.</p><p>ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ (ಎಐಎಡಿಎಂಕೆ) ಹಾಗೂ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಒಂದುಗೂಡಿದ ಮೇಲೆ ತಮಿಳುನಾಡಿನಲ್ಲಿ ಡಿಎಂಕೆ ಗಂಟುಮೂಟೆ ಕಟ್ಟುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಅವರು ಹೇಳಿದ್ದಾರೆ.</p><p>2026 ರಲ್ಲಿ ಜನರು ಡಿಎಂಕೆ ವಿರುದ್ಧ ನೀಡುವ ತೀರ್ಪನ್ನು ದೇವರೇ ಬಂದರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.</p><p>ನನ್ನ ಮೇಲೆ ಭರವಸೆ ಇಟ್ಟು ನನ್ನ ಕೈಗೆ ರಾಜ್ಯ ಬಿಜೆಪಿ ಮುನ್ನಡೆಸುವ ಹೊಣೆ ನೀಡಿರುವ ಬಿಜೆಪಿ ವರಿಷ್ಠರಿಗೆ ನಾನು ತಲೆಭಾಗುತ್ತೇನೆ. ಅವರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು 2026ರ ಚುನಾವಣೆಯ ಫಲಿತಾಂಶದೊಂದಿಗೆ ಉಳಿಸಿಕೊಂಡು ತೋರಿಸುತ್ತೇನೆ ಎಂದಿದ್ದಾರೆ.</p><p>ಎಐಎಡಿಎಂಕೆ–ಬಿಜೆಪಿ ಎಲ್ಲ ತರಹದಿಂದ ಒಗ್ಗಟ್ಟಾಗಿ ಹೋರಾಡಲಿದೆ. ನಮ್ಮ ಮೈತ್ರಿ ತಾಳೆ ಆಗುವುದಿಲ್ಲ ಎಂದಿರುವ ಡಿಎಂಕೆ ನಾಯಕರು ಮುಂದೆ ಎಲ್ಲಿರುತ್ತಾರೆ ನೋಡೋಣ ಎಂದು ನೈನಾರ್ ನಾಗೇಂದ್ರನ್ ಅವರು ಡಿಎಂಕೆ ವ್ಯಂಗ್ಯಕ್ಕೆ ತಿರುಗೇಟು ನೀಡಿದ್ದಾರೆ.</p><p>ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆ ಎದುರಿಸಲು ಕೆ.ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಾಗೂ ಬಿಜೆಪಿ ಇತ್ತೀಚೆಗೆ ಮೈತ್ರಿ ಮಾಡಿಕೊಂಡಿವೆ. ಇದಕ್ಕಾಗಿ ಕೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆ.ಅಣ್ಣಾಮಲೈ ಅವರ ರಾಜೀನಾಮೆಯನ್ನು ಪಡೆದಿತ್ತು.</p>.ಡಿಎಂಕೆ ಜೊತೆ ರಾಜಕೀಯ ಮೈತ್ರಿಯಷ್ಟೇ: ಡಿ.ಕೆ.ಶಿವಕುಮಾರ್.ತಮಿಳುನಾಡು | ಎಐಎಡಿಎಂಕೆ, ಬಿಜೆಪಿ ಮೈತ್ರಿ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: 2026 ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ–ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯ್ಯುವುದೇ ನಮ್ಮ ಮೈತ್ರಿಯ ಅಂತಿಮ ಗುರಿ ಎಂದು ತಮಿಳುನಾಡು ಬಿಜೆಪಿ ಘಟಕದ ನೂತನ ಅಧ್ಯಕ್ಷ ನೈನಾರ್ ನಾಗೇಂದ್ರನ್ ಗುಡುಗಿದ್ದಾರೆ.</p><p>ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಮಿಳುನಾಡಿನ ಪ್ರಮುಖ ವಿರೋಧ ಪಕ್ಷ (ಎಐಎಡಿಎಂಕೆ) ಹಾಗೂ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಒಂದುಗೂಡಿದ ಮೇಲೆ ತಮಿಳುನಾಡಿನಲ್ಲಿ ಡಿಎಂಕೆ ಗಂಟುಮೂಟೆ ಕಟ್ಟುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಅವರು ಹೇಳಿದ್ದಾರೆ.</p><p>2026 ರಲ್ಲಿ ಜನರು ಡಿಎಂಕೆ ವಿರುದ್ಧ ನೀಡುವ ತೀರ್ಪನ್ನು ದೇವರೇ ಬಂದರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.</p><p>ನನ್ನ ಮೇಲೆ ಭರವಸೆ ಇಟ್ಟು ನನ್ನ ಕೈಗೆ ರಾಜ್ಯ ಬಿಜೆಪಿ ಮುನ್ನಡೆಸುವ ಹೊಣೆ ನೀಡಿರುವ ಬಿಜೆಪಿ ವರಿಷ್ಠರಿಗೆ ನಾನು ತಲೆಭಾಗುತ್ತೇನೆ. ಅವರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು 2026ರ ಚುನಾವಣೆಯ ಫಲಿತಾಂಶದೊಂದಿಗೆ ಉಳಿಸಿಕೊಂಡು ತೋರಿಸುತ್ತೇನೆ ಎಂದಿದ್ದಾರೆ.</p><p>ಎಐಎಡಿಎಂಕೆ–ಬಿಜೆಪಿ ಎಲ್ಲ ತರಹದಿಂದ ಒಗ್ಗಟ್ಟಾಗಿ ಹೋರಾಡಲಿದೆ. ನಮ್ಮ ಮೈತ್ರಿ ತಾಳೆ ಆಗುವುದಿಲ್ಲ ಎಂದಿರುವ ಡಿಎಂಕೆ ನಾಯಕರು ಮುಂದೆ ಎಲ್ಲಿರುತ್ತಾರೆ ನೋಡೋಣ ಎಂದು ನೈನಾರ್ ನಾಗೇಂದ್ರನ್ ಅವರು ಡಿಎಂಕೆ ವ್ಯಂಗ್ಯಕ್ಕೆ ತಿರುಗೇಟು ನೀಡಿದ್ದಾರೆ.</p><p>ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆ ಎದುರಿಸಲು ಕೆ.ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಾಗೂ ಬಿಜೆಪಿ ಇತ್ತೀಚೆಗೆ ಮೈತ್ರಿ ಮಾಡಿಕೊಂಡಿವೆ. ಇದಕ್ಕಾಗಿ ಕೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆ.ಅಣ್ಣಾಮಲೈ ಅವರ ರಾಜೀನಾಮೆಯನ್ನು ಪಡೆದಿತ್ತು.</p>.ಡಿಎಂಕೆ ಜೊತೆ ರಾಜಕೀಯ ಮೈತ್ರಿಯಷ್ಟೇ: ಡಿ.ಕೆ.ಶಿವಕುಮಾರ್.ತಮಿಳುನಾಡು | ಎಐಎಡಿಎಂಕೆ, ಬಿಜೆಪಿ ಮೈತ್ರಿ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>