<p><strong>ಫತೇಹಪುರ/ಪ್ರಯಾಗರಾಜ್: </strong>ರಾಮನ ಕುರಿತು ತಾವು ನೀಡಿದ್ದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಿಶಾದ್ ಪಾರ್ಟಿ ಮುಖ್ಯಸ್ಥ ಸಂಜಯ್ ನಿಶಾದ್ ಅವರು ಮಂಗಳವಾರ ಕ್ಷಮೆ ಯಾಚಿಸಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ನಿಶಾದ್ ಪಾರ್ಟಿಯು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಹೀಗಾಗಿ ಸಂಜಯ್ ಅವರ ಹೇಳಿಕೆ ಆಡಳಿತಾರೂಢ ಪಕ್ಷವಾದ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು.</p>.<p>ಪ್ರಯಾಗರಾಜ್ನಲ್ಲಿ ಭಾನುವಾರ ಮಾತನಾಡಿದ್ದ ಅವರು, ‘ರಾಜ ದಶರಥ ರಾಮನ ತಂದೆ ಅಲ್ಲ. ಶೃಂಗಿ ಋಷಿ ನಿಶಾದ್ ಅವರು ರಾಮನ ತಂದೆ’ ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.</p>.<p>ಫತೇಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ಅವರು, ‘ರಾಮ ದೇವರ ಬಗ್ಗೆ ನಾನು ಏನಾದರೂ ತಪ್ಪು ಮಾತನಾಡಿದ್ದರೆ, ರಾಮನಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ನಿಶಾದ್ ಸಮುದಾಯ ಶ್ರೀರಾಮ ದೇವರನ್ನು ಅತ್ಯಂತ ಪೂಜ್ಯಭಾವದಿಂದ ಆರಾಧಿಸುತ್ತದೆ‘ ಎಂದರು.</p>.<p>‘ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ನಮ್ಮ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಸಮುದಾಯಕ್ಕೆ ರಾಮ ದೇವರ ಆಶೀರ್ವಾದ ಬಹಳಷ್ಟಿದೆ’ ಎಂದೂ ಅವರು ಹೇಳಿದರು.</p>.<p>‘ಬಿಜೆಪಿಯೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿರುವುದು ವಿರೋಧ ಪಕ್ಷಗಳ ನಿದ್ದೆಗೆಡಿಸಿದೆ. ಹೀಗಾಗಿ ನನ್ನ ಹೇಳಿಕೆಯನ್ನು ಅವು ತಿರುಚಿವೆ’ ಎಂದರು.</p>.<p>ಸೋಮವಾರ ನಡೆದ ಅಲಹಾಬಾದ್ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಶಿಕ್ಷಣ ಸಚಿವ ಹಾಗೂ ಉತ್ತರಪ್ರದೇಶದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫತೇಹಪುರ/ಪ್ರಯಾಗರಾಜ್: </strong>ರಾಮನ ಕುರಿತು ತಾವು ನೀಡಿದ್ದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಿಶಾದ್ ಪಾರ್ಟಿ ಮುಖ್ಯಸ್ಥ ಸಂಜಯ್ ನಿಶಾದ್ ಅವರು ಮಂಗಳವಾರ ಕ್ಷಮೆ ಯಾಚಿಸಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ನಿಶಾದ್ ಪಾರ್ಟಿಯು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಹೀಗಾಗಿ ಸಂಜಯ್ ಅವರ ಹೇಳಿಕೆ ಆಡಳಿತಾರೂಢ ಪಕ್ಷವಾದ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಬಗ್ಗೆ ಬಿಜೆಪಿ ಪ್ರತಿಕ್ರಿಯೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದ್ದವು.</p>.<p>ಪ್ರಯಾಗರಾಜ್ನಲ್ಲಿ ಭಾನುವಾರ ಮಾತನಾಡಿದ್ದ ಅವರು, ‘ರಾಜ ದಶರಥ ರಾಮನ ತಂದೆ ಅಲ್ಲ. ಶೃಂಗಿ ಋಷಿ ನಿಶಾದ್ ಅವರು ರಾಮನ ತಂದೆ’ ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.</p>.<p>ಫತೇಹಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ಅವರು, ‘ರಾಮ ದೇವರ ಬಗ್ಗೆ ನಾನು ಏನಾದರೂ ತಪ್ಪು ಮಾತನಾಡಿದ್ದರೆ, ರಾಮನಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ನಿಶಾದ್ ಸಮುದಾಯ ಶ್ರೀರಾಮ ದೇವರನ್ನು ಅತ್ಯಂತ ಪೂಜ್ಯಭಾವದಿಂದ ಆರಾಧಿಸುತ್ತದೆ‘ ಎಂದರು.</p>.<p>‘ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ನಮ್ಮ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಸಮುದಾಯಕ್ಕೆ ರಾಮ ದೇವರ ಆಶೀರ್ವಾದ ಬಹಳಷ್ಟಿದೆ’ ಎಂದೂ ಅವರು ಹೇಳಿದರು.</p>.<p>‘ಬಿಜೆಪಿಯೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿರುವುದು ವಿರೋಧ ಪಕ್ಷಗಳ ನಿದ್ದೆಗೆಡಿಸಿದೆ. ಹೀಗಾಗಿ ನನ್ನ ಹೇಳಿಕೆಯನ್ನು ಅವು ತಿರುಚಿವೆ’ ಎಂದರು.</p>.<p>ಸೋಮವಾರ ನಡೆದ ಅಲಹಾಬಾದ್ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಶಿಕ್ಷಣ ಸಚಿವ ಹಾಗೂ ಉತ್ತರಪ್ರದೇಶದಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರು ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>