<p><strong>ನವದೆಹಲಿ:</strong> ವಿವಿಧ ರಾಜ್ಯಗಳಲ್ಲಿ ಹಲವು ಕಾರಣಗಳಿಗೆ ತೆರವಾಗಿರುವ ಎರಡು ಲೋಕಸಭಾ ಕ್ಷೇತ್ರ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಶನಿವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.</p>.<p>ಹೊಸದಾಗಿ ನೇಮಕಗೊಂಡ ತ್ರಿಪುರ ಮುಖ್ಯಮಂತ್ರಿ ಡಾ ಮಾಣಿಕ್ ಸಹಾ ಅವರು ಟೌನ್ ಬೋರ್ಡೋವಾಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಗಿಳಿಯಲಿದ್ದಾರೆ. ಭೋಜ್ಪುರಿ ನಟ ದಿನೇಶ್ ಲಾಲ್ ಯಾದವ್ 'ನಿರಾಹುವಾ' ಉತ್ತರ ಪ್ರದೇಶದ ಅಜಂಗಢ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.</p>.<p>ರಾಜ್ಯಸಭೆಗೆ ಮರುನಾಮನಿರ್ದೇಶಗೊಳ್ಳುವಲ್ಲಿ ವಿಫಲರಾಗಿರುವ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಉತ್ತರ ಪ್ರದೇಶದ ರಾಂಪುರ ಲೋಕಸಭೆಯಿಂದ ಟಿಕೆಟ್ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಘನಶ್ಯಾಮ್ ಲೋಧಿ ಎಂಬುವವರನ್ನು ಬಿಜೆಪಿ ಕಣಕ್ಕಿಳಿಸಿದೆ.</p>.<p>ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗಳಿಗೆ ಕೇಂದ್ರ ಚುನಾವಣಾ ಸಮಿತಿಯು ಹೆಸರುಗಳನ್ನು ಅಂತಿಮಗೊಳಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ತ್ರಿಪುರದ ಅಗರ್ತಲಾ ವಿಧಾನಸಭಾ ಕ್ಷೇತ್ರದಿಂದ ಡಾ ಅಶೋಕ್ ಸಿನ್ಹಾ ದಿಂದ, ಸ್ವಪ್ನಾ ದಾಸ್ ಪಾಲ್ ಅವರು ಸುರ್ಮಾ ಕ್ಷೇತ್ರದಿಂದ ಮತ್ತು ಮಲಿನಾ ದೇಬನಾಥ್ ಅವರು ಜುಬರಾಜನಗರ ನಿಂದ ಸ್ಫರ್ಧಿಸಲಿದ್ದಾರೆ.</p>.<p>ದೆಹಲಿಯ ರಾಜಿಂದರ್ ನಗರ ವಿಧಾನಸಭಾ ಕ್ಷೇತ್ರದಿಂದ ರಾಜೇಶ್ ಭಾಟಿಯಾ ಅವರನ್ನು ಕಣಕ್ಕಿಳಿಸಲಾಗಿದೆ.</p>.<p>ಜಾರ್ಖಂಡ್ನ ಮಂದರ್ ವಿಧಾನಸಭಾ ಕ್ಷೇತ್ರದಿಂದ ಗಂಗೋತ್ರಿ ಕುಜೂರ್ ಮತ್ತು ಆಂಧ್ರಪ್ರದೇಶದ ಆತ್ಮಕೂರ್ ವಿಧಾನಸಭಾ ಕ್ಷೇತ್ರದಿಂದ ಗುಂಡ್ಲಪಲ್ಲಿ ಭರತ್ ಕುಮಾರ್ ಯಾದವ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.</p>.<p>ಲೋಕಸಭೆ ಮತ್ತು ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 6 ಕೊನೆಯ ದಿನವಾಗಿದೆ. ಜೂನ್ 23 ರಂದು ಮತದಾನ ನಡೆಯಲಿದ್ದು, ಜೂನ್ 26 ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿವಿಧ ರಾಜ್ಯಗಳಲ್ಲಿ ಹಲವು ಕಾರಣಗಳಿಗೆ ತೆರವಾಗಿರುವ ಎರಡು ಲೋಕಸಭಾ ಕ್ಷೇತ್ರ ಮತ್ತು ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಶನಿವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.</p>.<p>ಹೊಸದಾಗಿ ನೇಮಕಗೊಂಡ ತ್ರಿಪುರ ಮುಖ್ಯಮಂತ್ರಿ ಡಾ ಮಾಣಿಕ್ ಸಹಾ ಅವರು ಟೌನ್ ಬೋರ್ಡೋವಾಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಗಿಳಿಯಲಿದ್ದಾರೆ. ಭೋಜ್ಪುರಿ ನಟ ದಿನೇಶ್ ಲಾಲ್ ಯಾದವ್ 'ನಿರಾಹುವಾ' ಉತ್ತರ ಪ್ರದೇಶದ ಅಜಂಗಢ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.</p>.<p>ರಾಜ್ಯಸಭೆಗೆ ಮರುನಾಮನಿರ್ದೇಶಗೊಳ್ಳುವಲ್ಲಿ ವಿಫಲರಾಗಿರುವ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಉತ್ತರ ಪ್ರದೇಶದ ರಾಂಪುರ ಲೋಕಸಭೆಯಿಂದ ಟಿಕೆಟ್ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಘನಶ್ಯಾಮ್ ಲೋಧಿ ಎಂಬುವವರನ್ನು ಬಿಜೆಪಿ ಕಣಕ್ಕಿಳಿಸಿದೆ.</p>.<p>ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗಳಿಗೆ ಕೇಂದ್ರ ಚುನಾವಣಾ ಸಮಿತಿಯು ಹೆಸರುಗಳನ್ನು ಅಂತಿಮಗೊಳಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ತ್ರಿಪುರದ ಅಗರ್ತಲಾ ವಿಧಾನಸಭಾ ಕ್ಷೇತ್ರದಿಂದ ಡಾ ಅಶೋಕ್ ಸಿನ್ಹಾ ದಿಂದ, ಸ್ವಪ್ನಾ ದಾಸ್ ಪಾಲ್ ಅವರು ಸುರ್ಮಾ ಕ್ಷೇತ್ರದಿಂದ ಮತ್ತು ಮಲಿನಾ ದೇಬನಾಥ್ ಅವರು ಜುಬರಾಜನಗರ ನಿಂದ ಸ್ಫರ್ಧಿಸಲಿದ್ದಾರೆ.</p>.<p>ದೆಹಲಿಯ ರಾಜಿಂದರ್ ನಗರ ವಿಧಾನಸಭಾ ಕ್ಷೇತ್ರದಿಂದ ರಾಜೇಶ್ ಭಾಟಿಯಾ ಅವರನ್ನು ಕಣಕ್ಕಿಳಿಸಲಾಗಿದೆ.</p>.<p>ಜಾರ್ಖಂಡ್ನ ಮಂದರ್ ವಿಧಾನಸಭಾ ಕ್ಷೇತ್ರದಿಂದ ಗಂಗೋತ್ರಿ ಕುಜೂರ್ ಮತ್ತು ಆಂಧ್ರಪ್ರದೇಶದ ಆತ್ಮಕೂರ್ ವಿಧಾನಸಭಾ ಕ್ಷೇತ್ರದಿಂದ ಗುಂಡ್ಲಪಲ್ಲಿ ಭರತ್ ಕುಮಾರ್ ಯಾದವ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.</p>.<p>ಲೋಕಸಭೆ ಮತ್ತು ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 6 ಕೊನೆಯ ದಿನವಾಗಿದೆ. ಜೂನ್ 23 ರಂದು ಮತದಾನ ನಡೆಯಲಿದ್ದು, ಜೂನ್ 26 ರಂದು ಮತ ಎಣಿಕೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>