‘ಪಾಕ್ ಪರ ಘೋಷಣೆ ಕೂಗಿದ್ದನ್ನು ಆರಂಭದಲ್ಲಿ ಕಾಂಗ್ರೆಸ್ ನಿರಾಕರಿಸಿತ್ತು ಮತ್ತು ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಬಿಜೆಪಿಯನ್ನು ಗುರಿಯಾಗಿಸಿಕೊಂಡಿತ್ತು. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ತಮ್ಮ ಪಕ್ಷದ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಬೇಕು’ ಎಂದು ಭಾಟಿಯಾ ಒತ್ತಾಯಿಸಿದರು.