<p><strong>ಚೆನ್ನೈ</strong>: ತಮಿಳುನಾಡು ಸಚಿವರಾದ ಅನಿತ ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದಾರೆಂದು ಆರೋಪಿಸಿರುವ ಬಿಜೆಪಿಯು, ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದೆ. ‘ವಿರೋಧ ಪಕ್ಷಗಳ ಮೈತ್ರಿಕೂಟದ ಆತ್ಮಸಾಕ್ಷಿ ಸತ್ತುಹೋಗಿದೆ’ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. </p>.<p>ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ, ಅನಿತ ರಾಧಾಕೃಷ್ಣನ್ ಅವರ ವಿವಾದಿತ ವಿಡಿಯೊವನ್ನು ‘ಎಕ್ಸ್’ ವೇದಿಕೆಯಲ್ಲಿ ಹಂಚಿಕೊಂಡು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.</p>.<p>‘ಡಿಎಂಕೆ ಮುಖಂಡರು ತಮ್ಮ ‘ಒರಟು ವರ್ತನೆ’ಯಲ್ಲಿ ತೀರಾ ಕೆಳಮಟ್ಟಕ್ಕೆ ಇಳಿದಿದ್ದು, ಅನಿತ ಅವರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸುವಂತೆ ಪಕ್ಷವು ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಿದೆ’ ಎಂದು ಅಣ್ಣಾಮಲೈ ತಿಳಿಸಿದ್ದಾರೆ.</p>.<p>‘ಡಿಎಂಕೆ ಸಂಸದೆ ಕೆ.ಕನಿಮೊಳಿ ಮತ್ತು ಇತರರ ಸಮ್ಮುಖದಲ್ಲಿ ರಾಧಾಕೃಷ್ಣನ್ ‘ಅಸಹ್ಯಕರ’ವಾಗಿ ಮಾತನಾಡಿದ್ದು, ಅವರೆಲ್ಲ ‘ಹೇಸಿಗೆ ಹುಟ್ಟಿಸುವ ಕ್ರಿಯೆ’ಗೆ ಸಾಕ್ಷಿಯಾಗಿದ್ದಾರೆ. ಇದು ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ಅಸಭ್ಯ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ಪ್ರಜಾಪ್ರಭುತ್ವದಲ್ಲಿ ಅಂತಹ ಭಾಷೆಗೆ ಸ್ಥಾನವಿಲ್ಲ. ಮನುಷ್ಯನ ವಿನಾಶ ಸಂಭವಿಸುವಾಗ ಮೊದಲು ಅವನ ಆತ್ಮಸಾಕ್ಷಿ ಸಾಯುತ್ತದೆ. ‘ಇಂಡಿಯಾ’ ಮೈತ್ರಿಕೂಟದಲ್ಲಿರುವವರ ಆತ್ಮಸಾಕ್ಷಿಯೂ ಸತ್ತುಹೋಗಿದೆ. -ಅನುರಾಗ್ ಠಾಕೂರ್ ಕೇಂದ್ರ ಸಚಿವ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡು ಸಚಿವರಾದ ಅನಿತ ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದಾರೆಂದು ಆರೋಪಿಸಿರುವ ಬಿಜೆಪಿಯು, ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದೆ. ‘ವಿರೋಧ ಪಕ್ಷಗಳ ಮೈತ್ರಿಕೂಟದ ಆತ್ಮಸಾಕ್ಷಿ ಸತ್ತುಹೋಗಿದೆ’ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. </p>.<p>ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ, ಅನಿತ ರಾಧಾಕೃಷ್ಣನ್ ಅವರ ವಿವಾದಿತ ವಿಡಿಯೊವನ್ನು ‘ಎಕ್ಸ್’ ವೇದಿಕೆಯಲ್ಲಿ ಹಂಚಿಕೊಂಡು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.</p>.<p>‘ಡಿಎಂಕೆ ಮುಖಂಡರು ತಮ್ಮ ‘ಒರಟು ವರ್ತನೆ’ಯಲ್ಲಿ ತೀರಾ ಕೆಳಮಟ್ಟಕ್ಕೆ ಇಳಿದಿದ್ದು, ಅನಿತ ಅವರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸುವಂತೆ ಪಕ್ಷವು ಚುನಾವಣಾ ಆಯೋಗಕ್ಕೆ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಿದೆ’ ಎಂದು ಅಣ್ಣಾಮಲೈ ತಿಳಿಸಿದ್ದಾರೆ.</p>.<p>‘ಡಿಎಂಕೆ ಸಂಸದೆ ಕೆ.ಕನಿಮೊಳಿ ಮತ್ತು ಇತರರ ಸಮ್ಮುಖದಲ್ಲಿ ರಾಧಾಕೃಷ್ಣನ್ ‘ಅಸಹ್ಯಕರ’ವಾಗಿ ಮಾತನಾಡಿದ್ದು, ಅವರೆಲ್ಲ ‘ಹೇಸಿಗೆ ಹುಟ್ಟಿಸುವ ಕ್ರಿಯೆ’ಗೆ ಸಾಕ್ಷಿಯಾಗಿದ್ದಾರೆ. ಇದು ರಾಜ್ಯದಲ್ಲಿ ಆಡಳಿತಾರೂಢ ಪಕ್ಷದ ಅಸಭ್ಯ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ಪ್ರಜಾಪ್ರಭುತ್ವದಲ್ಲಿ ಅಂತಹ ಭಾಷೆಗೆ ಸ್ಥಾನವಿಲ್ಲ. ಮನುಷ್ಯನ ವಿನಾಶ ಸಂಭವಿಸುವಾಗ ಮೊದಲು ಅವನ ಆತ್ಮಸಾಕ್ಷಿ ಸಾಯುತ್ತದೆ. ‘ಇಂಡಿಯಾ’ ಮೈತ್ರಿಕೂಟದಲ್ಲಿರುವವರ ಆತ್ಮಸಾಕ್ಷಿಯೂ ಸತ್ತುಹೋಗಿದೆ. -ಅನುರಾಗ್ ಠಾಕೂರ್ ಕೇಂದ್ರ ಸಚಿವ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>