<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣವು ಮನೀಷ್ ಸಿಸೋಡಿಯಾ ಅವರಲ್ಲಿಗೆ ನಿಂತು ಹೋಗುವುದಿಲ್ಲ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೂ ಇದರೊಂದಿಗೆ ನಂಟಿದೆ ಎಂದು ಬಿಜೆಪಿ ಭಾನುವಾರ ಆರೋಪಿಸಿದೆ.</p>.<p>ದೆಹಲಿಯ ನ್ಯಾಯಾಲಯವು ಸಿಸೋಡಿಯಾ ಅವರ ಜಾಮೀನು ಅರ್ಜಿ ತಳ್ಳಿಹಾಕಿರುವುದನ್ನು ಉಲ್ಲೇಖಿಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ‘ಕೇಜ್ರಿವಾಲ್ ಮತ್ತು ಮಾನ್ ಅವರ ಭ್ರಷ್ಟಾಚಾರದ ಪದವಿ ಬಹಿರಂಗಗೊಂಡಿದೆ’ ಎಂದಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆ ಕುರಿತು ಕೇಜ್ರಿವಾಲ್ ಅವರು ಟೀಕಿಸಿದ ಬಳಿಕ ಪೂನಾವಾಲಾ ಅವರ ಈ ಹೇಳಿಕೆ ಹೊರಬಿದ್ದಿದೆ.</p>.<p>‘ಲಂಚ ನೀಡಿರುವುದು ದೃಢಪಟ್ಟಿದೆ’ ಎಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯ ನೀಡಿರುವ ಹೇಳಿಕೆಯನ್ನೂ ಪೂನಾವಾಲ ಅವರು ಉಲ್ಲೇಖಿಸಿದರು.</p>.<p>‘ವಿವಾದಾತ್ಮಕ ಅಬಕಾರಿ ನೀತಿಯನ್ನು ಕೇಜ್ರಿವಾಲ್ ಅವರ ಮಟ್ಟದಲ್ಲೇ ರೂಪಿಸಲಾಗಿದೆ’ ಎಂದೂ ಆರೋಪಿಸಿದ್ದಾರೆ.</p>.<p>ಪಂಜಾಬ್ನ ಅಬಕಾರಿ ಇಲಾಖೆಯನ್ನು ಬಳಸಿಕೊಂಡು ಮದ್ಯದ ಸಗಟು ವ್ಯಾಪಾರಿಯೊಬ್ಬರನ್ನು ತಮ್ಮ ಪರವಾನಗಿಯನ್ನು ಒಪ್ಪಿಸುವಂತೆ ಒತ್ತಾಯಿಸಲಾಗಿದೆ ಎಂದೂ ಮಾನ್ ಅವರನ್ನು ಗುರಿಯಾಗಿಸಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣವು ಮನೀಷ್ ಸಿಸೋಡಿಯಾ ಅವರಲ್ಲಿಗೆ ನಿಂತು ಹೋಗುವುದಿಲ್ಲ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೂ ಇದರೊಂದಿಗೆ ನಂಟಿದೆ ಎಂದು ಬಿಜೆಪಿ ಭಾನುವಾರ ಆರೋಪಿಸಿದೆ.</p>.<p>ದೆಹಲಿಯ ನ್ಯಾಯಾಲಯವು ಸಿಸೋಡಿಯಾ ಅವರ ಜಾಮೀನು ಅರ್ಜಿ ತಳ್ಳಿಹಾಕಿರುವುದನ್ನು ಉಲ್ಲೇಖಿಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ‘ಕೇಜ್ರಿವಾಲ್ ಮತ್ತು ಮಾನ್ ಅವರ ಭ್ರಷ್ಟಾಚಾರದ ಪದವಿ ಬಹಿರಂಗಗೊಂಡಿದೆ’ ಎಂದಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆ ಕುರಿತು ಕೇಜ್ರಿವಾಲ್ ಅವರು ಟೀಕಿಸಿದ ಬಳಿಕ ಪೂನಾವಾಲಾ ಅವರ ಈ ಹೇಳಿಕೆ ಹೊರಬಿದ್ದಿದೆ.</p>.<p>‘ಲಂಚ ನೀಡಿರುವುದು ದೃಢಪಟ್ಟಿದೆ’ ಎಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ನ್ಯಾಯಾಲಯ ನೀಡಿರುವ ಹೇಳಿಕೆಯನ್ನೂ ಪೂನಾವಾಲ ಅವರು ಉಲ್ಲೇಖಿಸಿದರು.</p>.<p>‘ವಿವಾದಾತ್ಮಕ ಅಬಕಾರಿ ನೀತಿಯನ್ನು ಕೇಜ್ರಿವಾಲ್ ಅವರ ಮಟ್ಟದಲ್ಲೇ ರೂಪಿಸಲಾಗಿದೆ’ ಎಂದೂ ಆರೋಪಿಸಿದ್ದಾರೆ.</p>.<p>ಪಂಜಾಬ್ನ ಅಬಕಾರಿ ಇಲಾಖೆಯನ್ನು ಬಳಸಿಕೊಂಡು ಮದ್ಯದ ಸಗಟು ವ್ಯಾಪಾರಿಯೊಬ್ಬರನ್ನು ತಮ್ಮ ಪರವಾನಗಿಯನ್ನು ಒಪ್ಪಿಸುವಂತೆ ಒತ್ತಾಯಿಸಲಾಗಿದೆ ಎಂದೂ ಮಾನ್ ಅವರನ್ನು ಗುರಿಯಾಗಿಸಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>