‘ಸಿಎಎ ಹೆಸರಿನಡಿ ಸುಳ್ಳನ್ನು ವ್ಯವಸ್ಥಿತವಾಗಿ ಹಬ್ಬಿಸುವ ಮೂಲಕ ಕೋಮು ಧ್ರುವೀಕರಣಕ್ಕೆ ಮುಖ್ಯಮಂತ್ರಿ ಯತ್ನಿಸುತ್ತಿದ್ದಾರೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಆರೋಪಕ್ಕೆ ಆಧಾರವೇನು? ಸಿಎಎ ಯಾವುದೇ ಒಂದು ನಿರ್ದಿಷ್ಟ ಸಮುದಾಯಕ್ಕೆ ಪೌರತ್ವವನ್ನು ನಿರಾಕರಿಸುವುದಿಲ್ಲ’ ಎಂದು ಹೇಳಿದ್ದಾರೆ.
ಕಾಸರಗೋಡಿನಲ್ಲಿ ಶನಿವಾರ ಸಿಪಿಎಂ ಆಯೋಜಿಸಿದ್ದ ಸಿಎಎ ವಿರೋಧಿ ರ್ಯಾಲಿಯಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಪಿಣರಾಯಿ, ‘ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸಮಾನತೆಯ ಪರಿಕಲ್ಪನೆಯನ್ನು ಕಾನೂನಿನ ಮೂಲಕ ಚೂರುಚೂರು ಮಾಡಲಾಗುತ್ತಿದೆ. ಇದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿರುವ ಕಾನೂನು’ ಎಂದು ಗುಡುಗಿದ್ದರು.
ಕೇರಳದ ಐದು ಕಡೆ ಸಿಎಎ ವಿರೋಧಿ ರ್ಯಾಲಿಗಳನ್ನು ಆಡಳಿತಾರೂಢ ಎಡಪಕ್ಷಗಳು ಆಯೋಜಿಸಿವೆ.