<p><strong>ನವದೆಹಲಿ:</strong> ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಅಮಾನತುಗೊಂಡಿರುವ ಪಕ್ಷದ ನಾಯಕ ಶಹಜಹಾನ್ ಶೇಖ್ ಅವರನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.</p>.<p>‘ಒಂದೆಡೆ ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ, ಬೇಟಿ ಪಡಾವೋ’ ಎಂಬ ಸಂದೇಶವನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಮಮತಾ ದೀದಿ ಅವರು ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಿಂದ ‘ಶಾಹಜಹಾನ್ ಬಚಾವೋ’ ಎಂಬ ಸಂದೇಶವನ್ನು ನೀಡುತ್ತಿದ್ದಾರೆ’ ಎಂದು ಪೂನಾವಾಲಾ ವಾಗ್ದಾಳಿ ನಡೆಸಿದ್ದಾರೆ.</p><p>‘ಕಾಂಗ್ರೆಸ್ನವರು 'ಲಡ್ಕಿ ಹೂಂ, ಲಡ್ ಸಕ್ತಿ ಹೂಂ' ನಂತಹ ಅಭಿಯಾನಗಳನ್ನು ನಡೆಸುತ್ತಾರೆ. ಆದರೆ, ಮಹಿಳಾ ಸಬಲೀಕರಣಕ್ಕಾಗಿ ಏನನ್ನೂ ಮಾಡಿಲ್ಲ’ ಎಂದು ಅವರು ತಿಳಿಸಿದ್ದಾರೆ.</p><p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಪೂನಾವಾಲಾ, ‘ಪ್ರಚಾರ ಮತ್ತು ಘೋಷಣೆಗಳನ್ನು ಪ್ರಾರಂಭಿಸುವ ಬದಲು, ಅವರು (ಕೇಜ್ರಿವಾಲ್) ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಬೇಕು’ ಎಂದು ಹೇಳಿದ್ದಾರೆ.</p><p>‘ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಪ್ರಚಾರಗಳನ್ನು ಪ್ರಾರಂಭಿಸುತ್ತಿದ್ದಾರೆ. ಆದರೆ, ಅವರು ಇ.ಡಿ ತನಿಖೆಗೆ ಏಕೆ ಸಹಕರಿಸುತ್ತಿಲ್ಲ. ಕೇಂದ್ರೀಯ ಸಂಸ್ಥೆಗಳ ಮುಂದೆ ಹಾಜರಾಗಲು ಏಕೆ ಹಿಂಜರಿಯುತ್ತಿದ್ದಾರೆ ಎಂಬುದಕ್ಕೆ ಮೊದಲು ಉತ್ತರಿಸಬೇಕು’ ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.</p><p>ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಹಗರಣದ ಪ್ರಕರಣಗಳಲ್ಲಿ ಶಹಜಹಾನ್ ಶೇಖ್ ಪ್ರಮುಖ ಆರೋಪಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಅಮಾನತುಗೊಂಡಿರುವ ಪಕ್ಷದ ನಾಯಕ ಶಹಜಹಾನ್ ಶೇಖ್ ಅವರನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಆರೋಪಿಸಿದ್ದಾರೆ.</p>.<p>‘ಒಂದೆಡೆ ಪ್ರಧಾನಿ ಮೋದಿ ಅವರು ‘ಬೇಟಿ ಬಚಾವೋ, ಬೇಟಿ ಪಡಾವೋ’ ಎಂಬ ಸಂದೇಶವನ್ನು ನೀಡುತ್ತಿದ್ದರೆ, ಮತ್ತೊಂದೆಡೆ ಮಮತಾ ದೀದಿ ಅವರು ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಿಂದ ‘ಶಾಹಜಹಾನ್ ಬಚಾವೋ’ ಎಂಬ ಸಂದೇಶವನ್ನು ನೀಡುತ್ತಿದ್ದಾರೆ’ ಎಂದು ಪೂನಾವಾಲಾ ವಾಗ್ದಾಳಿ ನಡೆಸಿದ್ದಾರೆ.</p><p>‘ಕಾಂಗ್ರೆಸ್ನವರು 'ಲಡ್ಕಿ ಹೂಂ, ಲಡ್ ಸಕ್ತಿ ಹೂಂ' ನಂತಹ ಅಭಿಯಾನಗಳನ್ನು ನಡೆಸುತ್ತಾರೆ. ಆದರೆ, ಮಹಿಳಾ ಸಬಲೀಕರಣಕ್ಕಾಗಿ ಏನನ್ನೂ ಮಾಡಿಲ್ಲ’ ಎಂದು ಅವರು ತಿಳಿಸಿದ್ದಾರೆ.</p><p>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಪೂನಾವಾಲಾ, ‘ಪ್ರಚಾರ ಮತ್ತು ಘೋಷಣೆಗಳನ್ನು ಪ್ರಾರಂಭಿಸುವ ಬದಲು, ಅವರು (ಕೇಜ್ರಿವಾಲ್) ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಬೇಕು’ ಎಂದು ಹೇಳಿದ್ದಾರೆ.</p><p>‘ಅರವಿಂದ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಪ್ರಚಾರಗಳನ್ನು ಪ್ರಾರಂಭಿಸುತ್ತಿದ್ದಾರೆ. ಆದರೆ, ಅವರು ಇ.ಡಿ ತನಿಖೆಗೆ ಏಕೆ ಸಹಕರಿಸುತ್ತಿಲ್ಲ. ಕೇಂದ್ರೀಯ ಸಂಸ್ಥೆಗಳ ಮುಂದೆ ಹಾಜರಾಗಲು ಏಕೆ ಹಿಂಜರಿಯುತ್ತಿದ್ದಾರೆ ಎಂಬುದಕ್ಕೆ ಮೊದಲು ಉತ್ತರಿಸಬೇಕು’ ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ.</p><p>ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಹಗರಣದ ಪ್ರಕರಣಗಳಲ್ಲಿ ಶಹಜಹಾನ್ ಶೇಖ್ ಪ್ರಮುಖ ಆರೋಪಿಯಾಗಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>