<p><strong>ನವದೆಹಲಿ:</strong> ಬಾಲಿವುಡ್ ನಟ ಸೈಫ್ ಅಲಿಖಾನ್ ಅವರ ಮೇಲಿನ ದಾಳಿಯನ್ನು ಉಲ್ಲೇಖಿಸಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಡಬಲ್ ಎಂಜಿನ್ ಸರ್ಕಾವು ಸೈಫ್ ಅಲಿ ಖಾನ್ ರಂತಹ ಸೆಲೆಬ್ರಿಟಿಗಳ ಸುರಕ್ಷತೆಯನ್ನೇ ಖಚಿತಡಿಸಿಕೊಳ್ಳದಿರುವಾಗ, ಸಾಮಾನ್ಯ ಜನರು ಏನನ್ನು ನಿರೀಕ್ಷಿಸಬಹುದು’ ಎಂದು ಪ್ರಶ್ನಿಸಿದ್ದಾರೆ.</p>.ಜೀವಕ್ಕೆ ಆಪತ್ತು ಇದೆ ಎಂದು ಗುಪ್ತಚರ ಇಲಾಖೆ: ದೇವರಿದ್ದಾನೆ ಎಂದ ಕೇಜ್ರಿವಾಲ್.<p>‘ಇಂತಹ ದಾಳಿ ಹೊಸದಲ್ಲ. ಸಲ್ಮಾನ್ ಖಾನ್ ಅವರ ನಿವಾಸದ ಬಳಿ ಗುಂಡಿನ ದಾಳಿ ನಡೆದಿತ್ತು. ಬಿಜೆಪಿಯೊಂದಿಗೆ ಮೈತ್ರಿಯಾಗಿದ್ದ ಪಕ್ಷದ ನಾಯಕ ಬಾಬಾ ಸಿದ್ದೀಕಿಯವರ ಕೊಲೆಯಾಗಿದೆ. ಇದು ದೇಶದ ಕಾನೂನು ಸುವ್ಯವಸ್ಥೆಯ ದ್ಯೋತಕ’ ಎಂದು ಅವರು ಟೀಕಿಸಿದ್ದಾರೆ.</p><p>‘ಬಿಜೆಪಿಗೆ ಭಾರತ–ಬಾಂಗ್ಲಾದೇಶ ಗಡಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಶದ ಸೆಲೆಬ್ರಿಟಗಳ, ದೇಶದ ರಾಜಧಾನಿಯ ರಕ್ಷಣೆ ಮಾಡಲಾಗುತ್ತಿಲ್ಲ. ದೆಹಲಿಯ ರಸ್ತೆಗಳಲ್ಲಿ ಗ್ಯಾಂಗ್ವಾರ್ ನಡೆಯುತ್ತಿದೆ. ವ್ಯಾಪಾರಿಗಳಿಗೆ ಬೆದರಿಕೆ ಕರೆಗಳು ಬರುತ್ತಿವೆ’ ಎಂದರು.</p><p>ವ್ಯಾಪಾರಿಗಳು, ಮಹಿಳೆಯರು, ಮಕ್ಕಳಿಗೆ ಸುರಕ್ಷತೆ ಇಲ್ಲ. ಡಬಲ್ ಎಂಜಿನ್ ಸರ್ಕಾರಕ್ಕೆ ಒಳ್ಳೆಯ ಆಡಳಿತ ನೀಡಲೂ ಬರುವುದಿಲ್ಲ. ದೇಶದ ಸುರಕ್ಷತವಾಗಿಡಲೂ ಗೊತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.</p> .ಕಾನೂನು ಸುವ್ಯವಸ್ಥೆ ಬಗ್ಗೆ ರಾಜಕೀಯ ಬೇಡ: ಅರವಿಂದ ಕೇಜ್ರಿವಾಲ್ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಲಿವುಡ್ ನಟ ಸೈಫ್ ಅಲಿಖಾನ್ ಅವರ ಮೇಲಿನ ದಾಳಿಯನ್ನು ಉಲ್ಲೇಖಿಸಿ ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.</p><p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಡಬಲ್ ಎಂಜಿನ್ ಸರ್ಕಾವು ಸೈಫ್ ಅಲಿ ಖಾನ್ ರಂತಹ ಸೆಲೆಬ್ರಿಟಿಗಳ ಸುರಕ್ಷತೆಯನ್ನೇ ಖಚಿತಡಿಸಿಕೊಳ್ಳದಿರುವಾಗ, ಸಾಮಾನ್ಯ ಜನರು ಏನನ್ನು ನಿರೀಕ್ಷಿಸಬಹುದು’ ಎಂದು ಪ್ರಶ್ನಿಸಿದ್ದಾರೆ.</p>.ಜೀವಕ್ಕೆ ಆಪತ್ತು ಇದೆ ಎಂದು ಗುಪ್ತಚರ ಇಲಾಖೆ: ದೇವರಿದ್ದಾನೆ ಎಂದ ಕೇಜ್ರಿವಾಲ್.<p>‘ಇಂತಹ ದಾಳಿ ಹೊಸದಲ್ಲ. ಸಲ್ಮಾನ್ ಖಾನ್ ಅವರ ನಿವಾಸದ ಬಳಿ ಗುಂಡಿನ ದಾಳಿ ನಡೆದಿತ್ತು. ಬಿಜೆಪಿಯೊಂದಿಗೆ ಮೈತ್ರಿಯಾಗಿದ್ದ ಪಕ್ಷದ ನಾಯಕ ಬಾಬಾ ಸಿದ್ದೀಕಿಯವರ ಕೊಲೆಯಾಗಿದೆ. ಇದು ದೇಶದ ಕಾನೂನು ಸುವ್ಯವಸ್ಥೆಯ ದ್ಯೋತಕ’ ಎಂದು ಅವರು ಟೀಕಿಸಿದ್ದಾರೆ.</p><p>‘ಬಿಜೆಪಿಗೆ ಭಾರತ–ಬಾಂಗ್ಲಾದೇಶ ಗಡಿಯನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಶದ ಸೆಲೆಬ್ರಿಟಗಳ, ದೇಶದ ರಾಜಧಾನಿಯ ರಕ್ಷಣೆ ಮಾಡಲಾಗುತ್ತಿಲ್ಲ. ದೆಹಲಿಯ ರಸ್ತೆಗಳಲ್ಲಿ ಗ್ಯಾಂಗ್ವಾರ್ ನಡೆಯುತ್ತಿದೆ. ವ್ಯಾಪಾರಿಗಳಿಗೆ ಬೆದರಿಕೆ ಕರೆಗಳು ಬರುತ್ತಿವೆ’ ಎಂದರು.</p><p>ವ್ಯಾಪಾರಿಗಳು, ಮಹಿಳೆಯರು, ಮಕ್ಕಳಿಗೆ ಸುರಕ್ಷತೆ ಇಲ್ಲ. ಡಬಲ್ ಎಂಜಿನ್ ಸರ್ಕಾರಕ್ಕೆ ಒಳ್ಳೆಯ ಆಡಳಿತ ನೀಡಲೂ ಬರುವುದಿಲ್ಲ. ದೇಶದ ಸುರಕ್ಷತವಾಗಿಡಲೂ ಗೊತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.</p> .ಕಾನೂನು ಸುವ್ಯವಸ್ಥೆ ಬಗ್ಗೆ ರಾಜಕೀಯ ಬೇಡ: ಅರವಿಂದ ಕೇಜ್ರಿವಾಲ್ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>