<p><strong>ನವದೆಹಲಿ: </strong>ಕೊರೊನಾ ಸೋಂಕಿನ ನಡುವೆಯೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದರೆ, ವಿರೋಧ ಪಕ್ಷದವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ವ್ಯಂಗ್ಯವಾಡಿದರು.</p>.<p>ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಏಳನೇ ವರ್ಷಾಚರಣೆ ಸಂದರ್ಭದಲ್ಲಿ ವರ್ಚುವಲ್ ಸಭೆ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ಪಕ್ಷದ ಎಲ್ಲ ಸಂಸದರು, ಮಂತ್ರಿಗಳು ಮತ್ತು ಶಾಸಕರು ಕೋವಿಡ್ ಮತ್ತು ಲಾಕ್ಡೌನ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕನಿಷ್ಠ ಎರಡು ಹಳ್ಳಿಗಳಲ್ಲಿ ಜನರಿಗೆ ಸೇವೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.</p>.<p>ಪಿಡುಗಿನ ಸಂದರ್ಭದಲ್ಲಿಯೂ ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸೇವೆ ಸಲ್ಲಿಸುತ್ತಾರೆಯೇ ಹೊರತು, ವಿರೋಧ ಪಕ್ಷದ ನಾಯಕರಂತೆ ವರ್ಚುವಲ್ ಪತ್ರಿಕಾಗೋಷ್ಠಿಗೆ ಸೀಮಿತವಾಗಿರುವುದಿಲ್ಲ ಎಂದರು.</p>.<p>ಒಂದು ಲಕ್ಷ ಗ್ರಾಮಗಳು ಮತ್ತು ಕುಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರು ಅಗತ್ಯವಿರುವವರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನಡ್ಡಾ ಹೇಳಿದರು.</p>.<p>ಈಗ ಕೋವಿಡ್ ಲಸಿಕೆ ಬಗ್ಗೆ ಮಾತನಾಡುತ್ತಿರುವ ವಿರೋಧ ಪಕ್ಷದವರು ಈ ಹಿಂದೆ ಲಸಿಕೆಗಳ ವಿರುದ್ಧ ಜನರಲ್ಲಿ ಅನುಮಾನ ಹುಟ್ಟು ಹಾಕಿದ್ದರು ಅವರು ಟೀಕಿಸಿದರು.</p>.<p>ಕೋವಿಡ್ ಕಾರಣದಿಂದ ಬಿಜೆಪಿ ಕಾರ್ಯಕರ್ತರು ವಾರ್ಷಿಕೋತ್ಸವವನ್ನು ದೇಶದಾದ್ಯಂತ ‘ಸೇವಾ ದಿವಸ್’ ಆಗಿ ಆಚರಿಸುತ್ತಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/man-ki-baat-pm-modi-said-incidentally-today-is-the-time-of-7-years-of-the-government-834594.html" target="_blank">ಮೋದಿ ಸರ್ಕಾರಕ್ಕೆ 7 ವರ್ಷ: ಮನ್ ಕಿ ಬಾತ್ನಲ್ಲಿ ಗುಣಗಾನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೊರೊನಾ ಸೋಂಕಿನ ನಡುವೆಯೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದರೆ, ವಿರೋಧ ಪಕ್ಷದವರು ಕ್ವಾರಂಟೈನ್ಗೆ ಒಳಗಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ವ್ಯಂಗ್ಯವಾಡಿದರು.</p>.<p>ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಏಳನೇ ವರ್ಷಾಚರಣೆ ಸಂದರ್ಭದಲ್ಲಿ ವರ್ಚುವಲ್ ಸಭೆ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ಪಕ್ಷದ ಎಲ್ಲ ಸಂಸದರು, ಮಂತ್ರಿಗಳು ಮತ್ತು ಶಾಸಕರು ಕೋವಿಡ್ ಮತ್ತು ಲಾಕ್ಡೌನ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕನಿಷ್ಠ ಎರಡು ಹಳ್ಳಿಗಳಲ್ಲಿ ಜನರಿಗೆ ಸೇವೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.</p>.<p>ಪಿಡುಗಿನ ಸಂದರ್ಭದಲ್ಲಿಯೂ ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಸೇವೆ ಸಲ್ಲಿಸುತ್ತಾರೆಯೇ ಹೊರತು, ವಿರೋಧ ಪಕ್ಷದ ನಾಯಕರಂತೆ ವರ್ಚುವಲ್ ಪತ್ರಿಕಾಗೋಷ್ಠಿಗೆ ಸೀಮಿತವಾಗಿರುವುದಿಲ್ಲ ಎಂದರು.</p>.<p>ಒಂದು ಲಕ್ಷ ಗ್ರಾಮಗಳು ಮತ್ತು ಕುಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರು ಅಗತ್ಯವಿರುವವರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನಡ್ಡಾ ಹೇಳಿದರು.</p>.<p>ಈಗ ಕೋವಿಡ್ ಲಸಿಕೆ ಬಗ್ಗೆ ಮಾತನಾಡುತ್ತಿರುವ ವಿರೋಧ ಪಕ್ಷದವರು ಈ ಹಿಂದೆ ಲಸಿಕೆಗಳ ವಿರುದ್ಧ ಜನರಲ್ಲಿ ಅನುಮಾನ ಹುಟ್ಟು ಹಾಕಿದ್ದರು ಅವರು ಟೀಕಿಸಿದರು.</p>.<p>ಕೋವಿಡ್ ಕಾರಣದಿಂದ ಬಿಜೆಪಿ ಕಾರ್ಯಕರ್ತರು ವಾರ್ಷಿಕೋತ್ಸವವನ್ನು ದೇಶದಾದ್ಯಂತ ‘ಸೇವಾ ದಿವಸ್’ ಆಗಿ ಆಚರಿಸುತ್ತಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/man-ki-baat-pm-modi-said-incidentally-today-is-the-time-of-7-years-of-the-government-834594.html" target="_blank">ಮೋದಿ ಸರ್ಕಾರಕ್ಕೆ 7 ವರ್ಷ: ಮನ್ ಕಿ ಬಾತ್ನಲ್ಲಿ ಗುಣಗಾನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>