‘ಇದರ ಅರ್ಥ ಏನು? ದೇವರ ಸ್ವಂತ ನಾಡು ಕೇರಳಕ್ಕೆ ನೀವು ಕೆಟ್ಟ ಹೆಸರು ತರುತ್ತಿದ್ದೀರಿ’ ಎಂದು ಹೇಳಿದ ನಡ್ಡಾ ಅವರು, ಹೀಗೆ ಮಾಡುವುದಕ್ಕೆ ಅವಕಾಶ ಕೊಡಬಹುದೇ ಎಂದು ಅಲ್ಲಿ ಸೇರಿದ್ದವರನ್ನು ಪ್ರಶ್ನಿಸಿದ್ದಾರೆ. ಭಾನುವಾರ ಕೊಚ್ಚಿಯಲ್ಲಿ ನಡೆದ ಬಾಂಬ್ ಸ್ಫೋಟದ ಬಗ್ಗೆ ಉಲ್ಲೇಖಿಸಿ ನಡ್ಡಾ ಅವರು, ‘ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ತೀವ್ರವಾದವನ್ನು ಉಪೇಕ್ಷಿಸಿದ ಕಾರಣಕ್ಕೆ ಶಾಂತಿಯುತ ರಾಜ್ಯದಲ್ಲಿ ಇಂತಹ ಘಟನೆ ನಡೆದಿದೆ’ ಎಂದು ದೂರಿದ್ದಾರೆ.