<p><strong>ತಿರುವನಂತಪುರ:</strong> ವಯನಾಡ್ ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂಬುದಾಗಿ ಘೋಷಿಸಲು ಅವಕಾಶವಿಲ್ಲ ಎಂದು ಬಿಜೆಪಿ ಮುಖಂಡ ವಿ.ಮುರಳೀಧರನ್ ಹೇಳಿದ್ದಾರೆ.</p>.<p>ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಮುಂದಿಟ್ಟಿರುವ ಬೇಡಿಕೆಗೆ ಬಿಜೆಪಿಯು ಭಾನುವಾರ ಪ್ರತಿಕ್ರಿಯಿಸಿದೆ. </p>.<p>‘ಅಂತಹ ಪರಿಕಲ್ಪನೆಯು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಡಿ ಅಸ್ತಿತ್ವದಲ್ಲಿಲ್ಲ. ಯುಪಿಎ ಸರ್ಕಾರದ ಅವಧಿಯಿಂದಲೂ ಈ ನೀತಿ ಬದಲಾಗಿಲ್ಲ’ ಎಂದು ಮುರಳೀಧರನ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p>.<p>‘ಪ್ರಾಕೃತಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಯಾವುದೇ ಅವಕಾಶವಿಲ್ಲ ಎಂದು 2013ರಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಮುಲ್ಲಪ್ಪಳ್ಳಿ ರಾಮಚಂದ್ರನ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದ್ದರು’ ಎಂಬ ಅಂಶವನ್ನೂ ಪೋಸ್ಟ್ ಮಾಡಿದ್ದಾರೆ.</p>.<p>‘ರಾಷ್ಟ್ರೀಯ ವಿಪತ್ತು’ ಎಂಬ ಅಧಿಕೃತ ಹೆಸರು ಇಲ್ಲದಿದ್ದರೂ, ಪ್ರತಿಯೊಂದು ಪ್ರಾಕೃತಿಕ ವಿಕೋಪವನ್ನೂ ಅದರ ತೀವ್ರತೆಗೆ ಅನುಗುಣವಾಗಿ ನಿರ್ವಹಿಸಲಾಗುತ್ತದೆ’ ಎಂದ ಅವರು, ‘ದುರಂತ ನಡೆದಿರುವ ಈ ಸಂದರ್ಭದಲ್ಲಿ ಅನಗತ್ಯ ವಿವಾದಗಳನ್ನು ಸೃಷ್ಟಿಸಲು ಪ್ರಯತ್ನಿಸಬೇಡಿ’ ಎಂದು ಮನವಿ ಮಾಡಿದರು.</p>.<p>ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ಕೇಂದ್ರವು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಎಲ್ಲ ರೀತಿಯ ನೆರವು ಒದಗಿಸಿದೆ. ವಯನಾಡ್ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯದಲ್ಲಿ ಸೇನೆಯು ಮುಂಚೂಣಿಯಲ್ಲಿದೆ ಎಂದರು.</p>.<p>ಬೇಡಿಕೆಯ ‘ವಿಧಿಬದ್ಧತೆ’ ಪರಿಶೀಲಿಸುತ್ತೇವೆ– ಗೋಪಿ: ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ವಿವಿಧ ವಲಯಗಳಿಂದ ಬಂದಿರುವ ಬೇಡಿಕೆಯ ಹಿಂದಿನ ಕಾನೂನುಬದ್ಧತೆಯನ್ನು ಕೇಂದ್ರ ಸರ್ಕಾರವು ಪರಿಶೀಲಿಸಲಿದೆ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಭಾನುವಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಯನಾಡ್ ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂಬುದಾಗಿ ಘೋಷಿಸಲು ಅವಕಾಶವಿಲ್ಲ ಎಂದು ಬಿಜೆಪಿ ಮುಖಂಡ ವಿ.ಮುರಳೀಧರನ್ ಹೇಳಿದ್ದಾರೆ.</p>.<p>ಭೂಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಮುಂದಿಟ್ಟಿರುವ ಬೇಡಿಕೆಗೆ ಬಿಜೆಪಿಯು ಭಾನುವಾರ ಪ್ರತಿಕ್ರಿಯಿಸಿದೆ. </p>.<p>‘ಅಂತಹ ಪರಿಕಲ್ಪನೆಯು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಡಿ ಅಸ್ತಿತ್ವದಲ್ಲಿಲ್ಲ. ಯುಪಿಎ ಸರ್ಕಾರದ ಅವಧಿಯಿಂದಲೂ ಈ ನೀತಿ ಬದಲಾಗಿಲ್ಲ’ ಎಂದು ಮುರಳೀಧರನ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p>.<p>‘ಪ್ರಾಕೃತಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಯಾವುದೇ ಅವಕಾಶವಿಲ್ಲ ಎಂದು 2013ರಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಮುಲ್ಲಪ್ಪಳ್ಳಿ ರಾಮಚಂದ್ರನ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದ್ದರು’ ಎಂಬ ಅಂಶವನ್ನೂ ಪೋಸ್ಟ್ ಮಾಡಿದ್ದಾರೆ.</p>.<p>‘ರಾಷ್ಟ್ರೀಯ ವಿಪತ್ತು’ ಎಂಬ ಅಧಿಕೃತ ಹೆಸರು ಇಲ್ಲದಿದ್ದರೂ, ಪ್ರತಿಯೊಂದು ಪ್ರಾಕೃತಿಕ ವಿಕೋಪವನ್ನೂ ಅದರ ತೀವ್ರತೆಗೆ ಅನುಗುಣವಾಗಿ ನಿರ್ವಹಿಸಲಾಗುತ್ತದೆ’ ಎಂದ ಅವರು, ‘ದುರಂತ ನಡೆದಿರುವ ಈ ಸಂದರ್ಭದಲ್ಲಿ ಅನಗತ್ಯ ವಿವಾದಗಳನ್ನು ಸೃಷ್ಟಿಸಲು ಪ್ರಯತ್ನಿಸಬೇಡಿ’ ಎಂದು ಮನವಿ ಮಾಡಿದರು.</p>.<p>ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ಕೇಂದ್ರವು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಎಲ್ಲ ರೀತಿಯ ನೆರವು ಒದಗಿಸಿದೆ. ವಯನಾಡ್ನಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯದಲ್ಲಿ ಸೇನೆಯು ಮುಂಚೂಣಿಯಲ್ಲಿದೆ ಎಂದರು.</p>.<p>ಬೇಡಿಕೆಯ ‘ವಿಧಿಬದ್ಧತೆ’ ಪರಿಶೀಲಿಸುತ್ತೇವೆ– ಗೋಪಿ: ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ವಿವಿಧ ವಲಯಗಳಿಂದ ಬಂದಿರುವ ಬೇಡಿಕೆಯ ಹಿಂದಿನ ಕಾನೂನುಬದ್ಧತೆಯನ್ನು ಕೇಂದ್ರ ಸರ್ಕಾರವು ಪರಿಶೀಲಿಸಲಿದೆ ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಭಾನುವಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>