<p><strong>ನವದೆಹಲಿ:</strong> ಕಳೆದ ವಾರ ಸುರಿದ ಮಳೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಂಟಾಗಿರುವ ಜಲಾವೃತ ಸಮಸ್ಯೆಗಳಿಗೆ ಎಎಪಿ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವಿರೇಂದ್ರ ಸಚ್ದೇವ ‘ನೀರಿನ ಒಳಚರಂಡಿ ಪಂಪ್ಗಳ ಸಮರ್ಪಕ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರದ ವೈಫಲ್ಯವೇ ಜೂನ್ 28ರಂದು ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಪ್ರಮುಖ ಕಾರಣ’ ಎಂದು ಆರೋಪಿಸಿದ್ದಾರೆ.</p><p>ಜೂನ್ 28ರಂದು ದೆಹಲಿಯಲ್ಲಿರುವ ಒಟ್ಟು 696 ಶಾಶ್ವತ ನೀರಿನ ಒಳಚರಂಡಿ ಪಂಪ್ಗಳ ಪೈಕಿ 400 ಪಂಪ್ಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಈಗಲೂ ಸುಮಾರು 300 ಪಂಪ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಮತ್ತೆ ಮಳೆಯಾದರೆ, ದೆಹಲಿಯಲ್ಲಿ ಪ್ರವಾಹವಾಗುತ್ತದೆ ಎಂದು ಅವರು ತಿಳಿಸಿದರು.</p><p>ಇದಕ್ಕೆ ತಿರುಗೇಟು ನೀಡಿರುವ ಎಎಪಿ ಸರ್ಕಾರ, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್ಡಿಎಂಸಿ) ಪ್ರದೇಶಗಳಲ್ಲಿಯೇ ಹೆಚ್ಚು ಪ್ರವಾಹ ಸಂಭವಿಸಿದೆ. ವಾಸ್ತವವನ್ನು ಮರೆಮಾಚಲು ಬಿಜೆಪಿ ದೆಹಲಿ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ ಎಂದು ಹೇಳಿದೆ.</p><p>ಮುಂದಿನ ಎರಡು ದಿನಗಳ ಕಾಲ ದೆಹಲಿಯಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿರುವ ಹವಾಮಾನ ಇಲಾಖೆ ‘ಆರೆಂಜ್’ ಅಲರ್ಟ್ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆದ ವಾರ ಸುರಿದ ಮಳೆಯಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಂಟಾಗಿರುವ ಜಲಾವೃತ ಸಮಸ್ಯೆಗಳಿಗೆ ಎಎಪಿ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವಿರೇಂದ್ರ ಸಚ್ದೇವ ‘ನೀರಿನ ಒಳಚರಂಡಿ ಪಂಪ್ಗಳ ಸಮರ್ಪಕ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸರ್ಕಾರದ ವೈಫಲ್ಯವೇ ಜೂನ್ 28ರಂದು ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲು ಪ್ರಮುಖ ಕಾರಣ’ ಎಂದು ಆರೋಪಿಸಿದ್ದಾರೆ.</p><p>ಜೂನ್ 28ರಂದು ದೆಹಲಿಯಲ್ಲಿರುವ ಒಟ್ಟು 696 ಶಾಶ್ವತ ನೀರಿನ ಒಳಚರಂಡಿ ಪಂಪ್ಗಳ ಪೈಕಿ 400 ಪಂಪ್ಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಈಗಲೂ ಸುಮಾರು 300 ಪಂಪ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಮತ್ತೆ ಮಳೆಯಾದರೆ, ದೆಹಲಿಯಲ್ಲಿ ಪ್ರವಾಹವಾಗುತ್ತದೆ ಎಂದು ಅವರು ತಿಳಿಸಿದರು.</p><p>ಇದಕ್ಕೆ ತಿರುಗೇಟು ನೀಡಿರುವ ಎಎಪಿ ಸರ್ಕಾರ, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಧೀನದಲ್ಲಿರುವ ದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್ಡಿಎಂಸಿ) ಪ್ರದೇಶಗಳಲ್ಲಿಯೇ ಹೆಚ್ಚು ಪ್ರವಾಹ ಸಂಭವಿಸಿದೆ. ವಾಸ್ತವವನ್ನು ಮರೆಮಾಚಲು ಬಿಜೆಪಿ ದೆಹಲಿ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ ಎಂದು ಹೇಳಿದೆ.</p><p>ಮುಂದಿನ ಎರಡು ದಿನಗಳ ಕಾಲ ದೆಹಲಿಯಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿರುವ ಹವಾಮಾನ ಇಲಾಖೆ ‘ಆರೆಂಜ್’ ಅಲರ್ಟ್ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>