‘ಬಿಜೆಪಿಯನ್ನು ಬಿಟ್ಟರೆ ಬೇರೆ ಯಾವ ಪಕ್ಷವೂ ಏಕರೂಪ ನಾಗರಿಕ ಸಂಹಿತೆ ಜಾರಿಯ ಪರವಾಗಿ ಇಲ್ಲ. ಅವರು ಈ ಕುರಿತು ಮಾತು ಕೂಡ ಆಡುವುದಿಲ್ಲ. ನೀವು ಅದನ್ನು ಜಾರಿಗೆ ತನ್ನಿ, ನಾವು ನಿಮ್ಮ ಜೊತೆಗೆ ಇದ್ದೇವೆ ಎಂದೂ ಈ ಪಕ್ಷಗಳು ಹೇಳುತ್ತಿಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ ಅಗತ್ಯ. ಏಕರೂಪ ನಾಗರಿಕ ಸಂಹಿತೆ ಕುರಿತು ಮುಕ್ತ ಮತ್ತು ಆರೋಗ್ಯಕರ ಚರ್ಚೆ ಆಗಬೇಕಾಗಿದೆ’ ಎಂದು ಶಾ ಹೇಳಿದ್ದಾರೆ.