<p><strong>ನವದೆಹಲಿ</strong>: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಗುರಿಯಾಗಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಖರ್ಗೆ, ರಾಮನಾಥ ಕೋವಿಂದ್ ಅವರ ಹೆಸರನ್ನು ಕೋವಿಡ್ ಎಂದು ಹಾಗೂ ದ್ರೌಪದಿ ಮುರ್ಮು ಅವರ ಹೆಸರನ್ನು ಮುರ್ಮಾ ಎಂದು ಹೇಳಿದ್ದಾರೆ. ಈ ಮೂಲಕ ಅವರನ್ನು ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.</p>.ನಟ ರಿಷಬ್ ಶೆಟ್ಟಿ ಜನ್ಮದಿನಕ್ಕೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪತ್ನಿ ಪ್ರಗತಿ.ಏರ್ ಇಂಡಿಯಾ ದುರಂತ: ವಿಮಾನಯಾನ ಸಚಿವಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ AAIB. <p>ಹೆಸರುಗಳನ್ನು ತಪ್ಪಾಗಿ ಉಚ್ಚರಿಸಿದ್ದಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರಕ್ಕೆ ಬಂದಿರುವುದರ ಹಿಂದಿನ ಬಿಜೆಪಿ ಪಕ್ಷದ ಉದ್ದೇಶ ನಮ್ಮ ಕಾಡುಗಳನ್ನು, ಆಸ್ತಿಗಳನ್ನು, ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ಮಾಡಿದೆಯೇ ಎಂದು ಖರ್ಗೆ ಆರೋಪಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.</p><p>ಇದರಿಂದ ಕಾಂಗ್ರೆಸ್ ಪಕ್ಷದ 'ದಲಿತ ವಿರೋಧಿ, ಆದಿವಾಸಿ ವಿರೋಧಿ ಮತ್ತು ಸಂವಿಧಾನ ವಿರೋಧಿ' ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಭಾಟಿಯಾ ಆರೋಪಿಸಿದ್ದಾರೆ.</p><p>ಖರ್ಗೆ ಹೇಳಿಕೆಯು ಆದಿವಾಸಿ ಮತ್ತು ದಲಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕೆಂದು ಭಾಟಿಯಾ ಒತ್ತಾಯಿಸಿದ್ದಾರೆ.</p>.ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್.ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ಬಿಜೆಪಿ.PHOTOS | Wimbledon 2025: ಸೆಂಟರ್ ಕೋರ್ಟ್ನಲ್ಲಿ ತಾರೆಯರ ಮೆರಗು.ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಗುರಿಯಾಗಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಖರ್ಗೆ, ರಾಮನಾಥ ಕೋವಿಂದ್ ಅವರ ಹೆಸರನ್ನು ಕೋವಿಡ್ ಎಂದು ಹಾಗೂ ದ್ರೌಪದಿ ಮುರ್ಮು ಅವರ ಹೆಸರನ್ನು ಮುರ್ಮಾ ಎಂದು ಹೇಳಿದ್ದಾರೆ. ಈ ಮೂಲಕ ಅವರನ್ನು ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.</p>.ನಟ ರಿಷಬ್ ಶೆಟ್ಟಿ ಜನ್ಮದಿನಕ್ಕೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಪತ್ನಿ ಪ್ರಗತಿ.ಏರ್ ಇಂಡಿಯಾ ದುರಂತ: ವಿಮಾನಯಾನ ಸಚಿವಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ AAIB. <p>ಹೆಸರುಗಳನ್ನು ತಪ್ಪಾಗಿ ಉಚ್ಚರಿಸಿದ್ದಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರಕ್ಕೆ ಬಂದಿರುವುದರ ಹಿಂದಿನ ಬಿಜೆಪಿ ಪಕ್ಷದ ಉದ್ದೇಶ ನಮ್ಮ ಕಾಡುಗಳನ್ನು, ಆಸ್ತಿಗಳನ್ನು, ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ಮಾಡಿದೆಯೇ ಎಂದು ಖರ್ಗೆ ಆರೋಪಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.</p><p>ಇದರಿಂದ ಕಾಂಗ್ರೆಸ್ ಪಕ್ಷದ 'ದಲಿತ ವಿರೋಧಿ, ಆದಿವಾಸಿ ವಿರೋಧಿ ಮತ್ತು ಸಂವಿಧಾನ ವಿರೋಧಿ' ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಭಾಟಿಯಾ ಆರೋಪಿಸಿದ್ದಾರೆ.</p><p>ಖರ್ಗೆ ಹೇಳಿಕೆಯು ಆದಿವಾಸಿ ಮತ್ತು ದಲಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಕಾಂಗ್ರೆಸ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕೆಂದು ಭಾಟಿಯಾ ಒತ್ತಾಯಿಸಿದ್ದಾರೆ.</p>.ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್.ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ಬಿಜೆಪಿ.PHOTOS | Wimbledon 2025: ಸೆಂಟರ್ ಕೋರ್ಟ್ನಲ್ಲಿ ತಾರೆಯರ ಮೆರಗು.ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>