ಬಿಜೆಪಿಯು ರಾಜಸ್ಥಾನ ಸರ್ಕಾರ ಉರುಳಿಸುವ ಸಂಚು ರೂಪಿಸಿತ್ತು ಎಂದು ಶುಕ್ರವಾರ ಆರೋಪಿಸಿದ್ದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ, ಬಿಜೆಪಿ ನಾಯಕರು ಮತ್ತು ಇತರರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಗೆ ಸಂಬಂಧಿಸಿದ ಎರಡು ಧ್ವನಿಮುದ್ರಿಕೆಗಳನ್ನೂ ಬಿಡುಗಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನೀಡಿದ ದೂರಿನ ಆಧಾರದಲ್ಲಿ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಪಡೆಯ (ಎಸ್ಒಜಿ) ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರೋಪಿ ಸಂಜಯ್ ಜೈನ್ರನ್ನು ಶುಕ್ರವಾರ ಬಂಧಿಸಲಾಗಿತ್ತು.