ಹಜಾರಿಬಾಗ್ನ ವಿನೋಬಾ ಭಾವೆ ವಿಶ್ವವಿದ್ಯಾಲಯ ಆವರಣದಲ್ಲಿ ರಾಜ್ಯ ಸರ್ಕಾರದ ವಸತಿ ಯೋಜನೆಯಾದ ‘ಅಬು ಆವಾಸ್’ ಅಡಿ ಫಲಾನುಭವಿಗಳಿಗೆ ಅನುಮೋದನೆ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ‘2019ರಲ್ಲಿ ಹೇಮಂತ್ ಸೊರೇನ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ, ಅದು ಮೂಲಸೌಕರ್ಯ (ಊಟ, ಬಟ್ಟೆ ಮತ್ತು ವಸತಿ) ಹಾಗೂ ಶೈಕ್ಷಣಿಕ ಅಭಿವೃದ್ಧಿಯೆಡೆಗೆ ತನ್ನ ಗಮನವನ್ನು ಕೇಂದ್ರೀಕರಿಸಿತು’ ಎಂದರು.