<p><strong>ಕೋಯಿಕ್ಕೋಡ್:</strong> ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಇಂದು (ಶನಿವಾರ) ಕ್ಷೇತ್ರಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>ಬಿಜೆಪಿಯಿಂದ ಪ್ರಜಾಸತ್ತಾತ್ಮಕ ನಡವಳಿಕೆ ಪಾಲನೆಯಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. </p><p>'ಇಂದು ನಾವು ಬಿಜೆಪಿಯಿಂದ ಎದುರಿಸುತ್ತಿರುವ ರಾಜಕೀಯ ಸವಾಲುಗಳು ಭೂಕುಸಿತದಂತಿವೆ. ಯಾವುದೇ ನಿಯಮ ಅಥವಾ ವಿವರಣೆಗಳಿಲ್ಲ' ಎಂದು ಕಿಡಿಕಾರಿದ್ದಾರೆ. </p><p>'ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಯಾವುದೇ ಪ್ರಜಾಸತ್ತಾತ್ಮಕ ನಡವಳಿಕೆಗಳನ್ನು ಪಾಲಿಸುತ್ತಿಲ್ಲ. ಸಾಮಾನ್ಯ ರಾಜಕೀಯ ಹೋರಾಟದಲ್ಲೂ ಅದನ್ನು ಅನುಸರಿಸುತ್ತಿಲ್ಲ' ಎಂದು ಹೇಳಿದ್ದಾರೆ. </p><p>ಈ ವೇಳೆ ವಯನಾಡಿನ ಜನತೆಯ ದನಿಯಾಗುವುದಾಗಿ ಪ್ರಿಯಾಂಕಾ ಭರವಸೆ ನೀಡಿದ್ದಾರೆ. </p><p>'ನಾನು ನಿಮ್ಮ ದನಿಯಾಗಲಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಯತ್ನಿಸುತ್ತೇನೆ. ನಿಮ್ಮ ನಂಬಿಕೆ, ಮೌಲ್ಯ ಹಾಗೂ ಆಕಾಂಕ್ಷೆಗಳ ಈಡೇರಿಕೆಗಾಗಿ ಕೊನೆಯವರೆಗೂ ನಿಲ್ಲುತ್ತೇನೆ' ಎಂದು ಹೇಳಿದ್ದಾರೆ. </p><p>ಪ್ರಿಯಾಂಕಾ ಗಾಂಧಿ ಅವರ ಸಾರ್ವಜನಿಕ ಸಮಾವೇಶದಲ್ಲಿ ಸಹೋದರ ರಾಹುಲ್ ಗಾಂಧಿ ಉಪಸ್ಥಿತರಿದ್ದರು. </p>.ವಯನಾಡಿಗೆ ನೆರವು; ಕೇರಳ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಕರೆ.ಕೇರಳದ ಸೀರೆ ಉಟ್ಟು ಪ್ರಿಯಾಂಕಾ ಸಂಸತ್ ಪ್ರವೇಶ; ಫೋಟೊ ಕ್ಲಿಕ್ಕಿಸಿದ ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್:</strong> ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ ಇಂದು (ಶನಿವಾರ) ಕ್ಷೇತ್ರಕ್ಕೆ ಮೊದಲ ಬಾರಿ ಭೇಟಿ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>ಬಿಜೆಪಿಯಿಂದ ಪ್ರಜಾಸತ್ತಾತ್ಮಕ ನಡವಳಿಕೆ ಪಾಲನೆಯಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. </p><p>'ಇಂದು ನಾವು ಬಿಜೆಪಿಯಿಂದ ಎದುರಿಸುತ್ತಿರುವ ರಾಜಕೀಯ ಸವಾಲುಗಳು ಭೂಕುಸಿತದಂತಿವೆ. ಯಾವುದೇ ನಿಯಮ ಅಥವಾ ವಿವರಣೆಗಳಿಲ್ಲ' ಎಂದು ಕಿಡಿಕಾರಿದ್ದಾರೆ. </p><p>'ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಯಾವುದೇ ಪ್ರಜಾಸತ್ತಾತ್ಮಕ ನಡವಳಿಕೆಗಳನ್ನು ಪಾಲಿಸುತ್ತಿಲ್ಲ. ಸಾಮಾನ್ಯ ರಾಜಕೀಯ ಹೋರಾಟದಲ್ಲೂ ಅದನ್ನು ಅನುಸರಿಸುತ್ತಿಲ್ಲ' ಎಂದು ಹೇಳಿದ್ದಾರೆ. </p><p>ಈ ವೇಳೆ ವಯನಾಡಿನ ಜನತೆಯ ದನಿಯಾಗುವುದಾಗಿ ಪ್ರಿಯಾಂಕಾ ಭರವಸೆ ನೀಡಿದ್ದಾರೆ. </p><p>'ನಾನು ನಿಮ್ಮ ದನಿಯಾಗಲಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಯತ್ನಿಸುತ್ತೇನೆ. ನಿಮ್ಮ ನಂಬಿಕೆ, ಮೌಲ್ಯ ಹಾಗೂ ಆಕಾಂಕ್ಷೆಗಳ ಈಡೇರಿಕೆಗಾಗಿ ಕೊನೆಯವರೆಗೂ ನಿಲ್ಲುತ್ತೇನೆ' ಎಂದು ಹೇಳಿದ್ದಾರೆ. </p><p>ಪ್ರಿಯಾಂಕಾ ಗಾಂಧಿ ಅವರ ಸಾರ್ವಜನಿಕ ಸಮಾವೇಶದಲ್ಲಿ ಸಹೋದರ ರಾಹುಲ್ ಗಾಂಧಿ ಉಪಸ್ಥಿತರಿದ್ದರು. </p>.ವಯನಾಡಿಗೆ ನೆರವು; ಕೇರಳ ಸರ್ಕಾರದ ಮೇಲೆ ಒತ್ತಡ ಹೇರಲು ರಾಹುಲ್ ಕರೆ.ಕೇರಳದ ಸೀರೆ ಉಟ್ಟು ಪ್ರಿಯಾಂಕಾ ಸಂಸತ್ ಪ್ರವೇಶ; ಫೋಟೊ ಕ್ಲಿಕ್ಕಿಸಿದ ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>