<p><strong>ಗುವಾಹಟಿ/ಲಖೀಂಪುರ ವರದಿ: </strong>ದೇಶದ ವಿವಿಧ ಭಾಗಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಗೊಳಿಸುವ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಾರೆ. ಆದರೆ ಅದನ್ನು ಅಸ್ಸಾಂನಲ್ಲಿ ಜಾರಿಗೊಳಿಸುವ ಪ್ರಸ್ತಾಪ ಮಾಡಲು ಧೈರ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೋಮವಾರ ಆರೋಪಿಸಿದ್ದಾರೆ.</p>.<p>ಗುವಾಹಟಿಯ ಪ್ರಸಿದ್ಧ ಕಾಮಾಕ್ಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪ್ರಿಯಾಂಕಾ ಅವರು ತಮ್ಮ ಎರಡು ದಿನಗಳ ಅಸ್ಸಾಂ ಪ್ರವಾಸಕ್ಕೆ ಸೋಮವಾರ ಚಾಲನೆ ನೀಡಿದರು. ಅಸ್ಸಾಂನ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ರಾಜ್ಯ ಉಸ್ತುವಾರಿ ನಾಯಕ ಜಿತೇಂದ್ರ ಸಿಂಗ್ ಅವರು ಜತೆಗಿದ್ದರು.</p>.<p>2019ರಲ್ಲಿ ಸಿಎಎ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗೆ ಅಸ್ಸಾಂ ಸಾಕ್ಷಿಯಾಗಿತ್ತು. ಐದು ಜನರು ಪ್ರಾಣ ಕಳೆದುಕೊಂಡಿದ್ದರು.</p>.<p>ಬಿಜೆಪಿ ನೀಡಿದ ಸುಳ್ಳು ಭರವಸೆಗಳಿಂದ ಜನರು ಬೇಸರಗೊಂಡಿರುವುದರಿಂದ ಕಾಂಗ್ರೆಸ್ ಮತ್ತು ಇತರ ಆರು ಪಕ್ಷಗಳ ಮೈತ್ರಿಕೂಟವು ಚುನಾವಣೆ ನಂತರ ಅಸ್ಸಾಂನಲ್ಲಿ ಸರ್ಕಾರ ರಚಿಸಲಿದೆ ಎಂದು ಪ್ರಿಯಾಂಕಾ ವಿಶ್ವಾಸದಿಂದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ/ಲಖೀಂಪುರ ವರದಿ: </strong>ದೇಶದ ವಿವಿಧ ಭಾಗಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನಗೊಳಿಸುವ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಾರೆ. ಆದರೆ ಅದನ್ನು ಅಸ್ಸಾಂನಲ್ಲಿ ಜಾರಿಗೊಳಿಸುವ ಪ್ರಸ್ತಾಪ ಮಾಡಲು ಧೈರ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೋಮವಾರ ಆರೋಪಿಸಿದ್ದಾರೆ.</p>.<p>ಗುವಾಹಟಿಯ ಪ್ರಸಿದ್ಧ ಕಾಮಾಕ್ಯ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪ್ರಿಯಾಂಕಾ ಅವರು ತಮ್ಮ ಎರಡು ದಿನಗಳ ಅಸ್ಸಾಂ ಪ್ರವಾಸಕ್ಕೆ ಸೋಮವಾರ ಚಾಲನೆ ನೀಡಿದರು. ಅಸ್ಸಾಂನ ಕಾಂಗ್ರೆಸ್ ಘಟಕದ ಅಧ್ಯಕ್ಷ ರಿಪುನ್ ಬೋರಾ, ರಾಜ್ಯ ಉಸ್ತುವಾರಿ ನಾಯಕ ಜಿತೇಂದ್ರ ಸಿಂಗ್ ಅವರು ಜತೆಗಿದ್ದರು.</p>.<p>2019ರಲ್ಲಿ ಸಿಎಎ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗೆ ಅಸ್ಸಾಂ ಸಾಕ್ಷಿಯಾಗಿತ್ತು. ಐದು ಜನರು ಪ್ರಾಣ ಕಳೆದುಕೊಂಡಿದ್ದರು.</p>.<p>ಬಿಜೆಪಿ ನೀಡಿದ ಸುಳ್ಳು ಭರವಸೆಗಳಿಂದ ಜನರು ಬೇಸರಗೊಂಡಿರುವುದರಿಂದ ಕಾಂಗ್ರೆಸ್ ಮತ್ತು ಇತರ ಆರು ಪಕ್ಷಗಳ ಮೈತ್ರಿಕೂಟವು ಚುನಾವಣೆ ನಂತರ ಅಸ್ಸಾಂನಲ್ಲಿ ಸರ್ಕಾರ ರಚಿಸಲಿದೆ ಎಂದು ಪ್ರಿಯಾಂಕಾ ವಿಶ್ವಾಸದಿಂದ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>