<p><strong>ನವದೆಹಲಿ:</strong> ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದ್ದು, ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸ್ ಪಕ್ಷಪಾತಿ ಧೋರಣೆ ತಳೆದಿದೆ ಎಂದು ದೆಹಲಿಯ ಮುಖ್ಯಮಂತ್ರಿ ಆತಿಶಿ ಇಂದು (ಮಂಗಳವಾರ) ಆರೋಪಿಸಿದ್ದಾರೆ. </p><p>ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಆತಿಶಿ ಪ್ರತಿಕ್ರಿಯೆ ನೀಡಿದ್ದಾರೆ. </p><p>'ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದೆ. ಆದರೆ ಕೇಸರಿ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸ್ ರಕ್ಷಣೆ ನೀಡುತ್ತಿದೆ. ಚುನಾವಣಾ ಆಯೋಗವು ದೂರು ನೀಡುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಆತಿಶಿ ವಾಗ್ದಾಳಿ ನಡೆಸಿದ್ದಾರೆ. </p><p>'ದೆಹಲಿಯ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದಾರೆ. ಚುನಾವಣೆಯಲ್ಲಿ ತಕ್ಕ ಉತ್ತರವನ್ನೇ ನೀಡಲಿದ್ದಾರೆ' ಎಂದು ಹೇಳಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ (ಫೆ. 5) ಮತದಾನ ನಡೆಯಲಿದ್ದು,ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. </p>.Delhi Elections: ಬಿಜೆಪಿಯ ದುಷ್ಕೃತ್ಯ ಸೆರೆಗೆ Spy ಕ್ಯಾಮೆರಾ ತಂಡ –ಕೇಜ್ರಿವಾಲ್.Delhi Polls: ವಿರೋಧ ಪಕ್ಷಗಳಿಂದ ಕೊಳಗೇರಿ ಮತದಾರರಿಗೆ ₹3,000 ಆಮಿಷ –ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದ್ದು, ಚುನಾವಣಾ ಆಯೋಗ ಮತ್ತು ದೆಹಲಿ ಪೊಲೀಸ್ ಪಕ್ಷಪಾತಿ ಧೋರಣೆ ತಳೆದಿದೆ ಎಂದು ದೆಹಲಿಯ ಮುಖ್ಯಮಂತ್ರಿ ಆತಿಶಿ ಇಂದು (ಮಂಗಳವಾರ) ಆರೋಪಿಸಿದ್ದಾರೆ. </p><p>ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಆತಿಶಿ ಪ್ರತಿಕ್ರಿಯೆ ನೀಡಿದ್ದಾರೆ. </p><p>'ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದೆ. ಆದರೆ ಕೇಸರಿ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸ್ ರಕ್ಷಣೆ ನೀಡುತ್ತಿದೆ. ಚುನಾವಣಾ ಆಯೋಗವು ದೂರು ನೀಡುವವರ ವಿರುದ್ಧವೇ ಪ್ರಕರಣಗಳನ್ನು ದಾಖಲಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ಆತಿಶಿ ವಾಗ್ದಾಳಿ ನಡೆಸಿದ್ದಾರೆ. </p><p>'ದೆಹಲಿಯ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದಾರೆ. ಚುನಾವಣೆಯಲ್ಲಿ ತಕ್ಕ ಉತ್ತರವನ್ನೇ ನೀಡಲಿದ್ದಾರೆ' ಎಂದು ಹೇಳಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಾಳೆ (ಫೆ. 5) ಮತದಾನ ನಡೆಯಲಿದ್ದು,ಫೆ.8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. </p>.Delhi Elections: ಬಿಜೆಪಿಯ ದುಷ್ಕೃತ್ಯ ಸೆರೆಗೆ Spy ಕ್ಯಾಮೆರಾ ತಂಡ –ಕೇಜ್ರಿವಾಲ್.Delhi Polls: ವಿರೋಧ ಪಕ್ಷಗಳಿಂದ ಕೊಳಗೇರಿ ಮತದಾರರಿಗೆ ₹3,000 ಆಮಿಷ –ಕೇಜ್ರಿವಾಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>