<p><strong>ನವದೆಹಲಿ</strong>: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಕೈಸರ್ಗಂಜ್ ಕ್ಷೇತ್ರದಿಂದ ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.</p><p>2009ರಿಂದ ಇದೇ ಮೊದಲ ಬಾರಿಗೆ ಈ ಕ್ಷೇತ್ರದ ಹಾಲಿ ಸಂಸದ, ಪ್ರಭಾವಿ ನಾಯಕರಾಗಿದ್ದ ಬ್ರಿಜ್ಭೂಷಣ್ ಅವರನ್ನು ಬಿಜೆಪಿ ಕಣದಿಂದ ಹೊರಗಿಟ್ಟಿದೆ. </p><p>ಕರಣ್ ಭೂಷಣ್ ಸಿಂಗ್, ಬ್ರಿಜ್ಭೂಷಣ್ ಅವರ ಕಿರಿಯ ಮಗ. ಈ ಕ್ಷೇತ್ರದಲ್ಲಿ ಬ್ರಿಜ್ಭೂಷಣ್ ಮೂರು ಬಾರಿ ಗೆಲುವು ಸಾಧಿಸಿದ್ದರು. 2019ರಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದರು.</p><p>ಬಿಬಿಎ ಓದಿರುವ ಕರಣ್ ಸಿಂಗ್, ಆಸ್ಟ್ರೇಲಿಯಾದಲ್ಲಿ ಬಿಸಿನೆಸ್ ಮಾನೇಜ್ಮೆಂಟ್ ಡಿಪ್ಲೊಮಾ ಸಹ ಪಡೆದಿದ್ದಾರೆ.</p><p>ಕರಣ್ ಸಿಂಗ್ ಅವರು ಸದ್ಯ ಉತ್ತರ ಪ್ರದೇಶದ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ. ಗೊಂಡಾ ಜಿಲ್ಲೆಯ ನವಾಬ್ ಗಂಜ್ನ ಗ್ರಾಮೀಣ ಅಭಿವೃದ್ಧಿ ಸಹಕಾರ ಬ್ಯಾಂಕ್ ಅಧ್ಯಕ್ಷರೂ ಆಗಿದ್ದಾರೆ. </p><p>ಕೈಸರ್ಗಂಜ್ನಲ್ಲಿ 5ನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಕೈಸರ್ಗಂಜ್ ಕ್ಷೇತ್ರದಿಂದ ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.</p><p>2009ರಿಂದ ಇದೇ ಮೊದಲ ಬಾರಿಗೆ ಈ ಕ್ಷೇತ್ರದ ಹಾಲಿ ಸಂಸದ, ಪ್ರಭಾವಿ ನಾಯಕರಾಗಿದ್ದ ಬ್ರಿಜ್ಭೂಷಣ್ ಅವರನ್ನು ಬಿಜೆಪಿ ಕಣದಿಂದ ಹೊರಗಿಟ್ಟಿದೆ. </p><p>ಕರಣ್ ಭೂಷಣ್ ಸಿಂಗ್, ಬ್ರಿಜ್ಭೂಷಣ್ ಅವರ ಕಿರಿಯ ಮಗ. ಈ ಕ್ಷೇತ್ರದಲ್ಲಿ ಬ್ರಿಜ್ಭೂಷಣ್ ಮೂರು ಬಾರಿ ಗೆಲುವು ಸಾಧಿಸಿದ್ದರು. 2019ರಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಕಂಡಿದ್ದರು.</p><p>ಬಿಬಿಎ ಓದಿರುವ ಕರಣ್ ಸಿಂಗ್, ಆಸ್ಟ್ರೇಲಿಯಾದಲ್ಲಿ ಬಿಸಿನೆಸ್ ಮಾನೇಜ್ಮೆಂಟ್ ಡಿಪ್ಲೊಮಾ ಸಹ ಪಡೆದಿದ್ದಾರೆ.</p><p>ಕರಣ್ ಸಿಂಗ್ ಅವರು ಸದ್ಯ ಉತ್ತರ ಪ್ರದೇಶದ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದಾರೆ. ಗೊಂಡಾ ಜಿಲ್ಲೆಯ ನವಾಬ್ ಗಂಜ್ನ ಗ್ರಾಮೀಣ ಅಭಿವೃದ್ಧಿ ಸಹಕಾರ ಬ್ಯಾಂಕ್ ಅಧ್ಯಕ್ಷರೂ ಆಗಿದ್ದಾರೆ. </p><p>ಕೈಸರ್ಗಂಜ್ನಲ್ಲಿ 5ನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>