<p>ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿದೆ.</p><p>ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯಕ್ಕೆ ಬಿಜೆಪಿ ಸಂಸದರು ಸಿದ್ಧತೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಕಟುವಾಗಿ ಟೀಕಿಸಿದ ಒಂದು ದಿನದ ಬಳಿಕ ಬಿಜೆಪಿ ಈ ನಿಲುವು ತೆಗೆದುಕೊಂಡಿದೆ.</p><p>ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಅವರ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ<strong> (Privilege Motion)</strong> ಮಂಡಿಸಲು ಸಿದ್ಧತೆ ನಡೆಸಿದ್ದಾರೆ.</p><p>ಬುಧವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿದೆ.</p><p>ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯಕ್ಕೆ ಬಿಜೆಪಿ ಸಂಸದರು ಸಿದ್ಧತೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಕಟುವಾಗಿ ಟೀಕಿಸಿದ ಒಂದು ದಿನದ ಬಳಿಕ ಬಿಜೆಪಿ ಈ ನಿಲುವು ತೆಗೆದುಕೊಂಡಿದೆ.</p><p>ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಅವರ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ<strong> (Privilege Motion)</strong> ಮಂಡಿಸಲು ಸಿದ್ಧತೆ ನಡೆಸಿದ್ದಾರೆ.</p><p>ಬುಧವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>