<p><strong>ನವದೆಹಲಿ</strong>: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದು ಮಾಡಬೇಕು ಹಾಗೂ ಅವರು ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.</p><p>ಈ ಸಂಬಂಧ, ತಮ್ಮ ಬೇಡಿಕೆಗಳನ್ನು ಒಳಗೊಂಡ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಸಲ್ಲಿಸಿದ್ದಾಗಿ ದುಬೆ ಗುರುವಾರ ಹೇಳಿದ್ದಾರೆ.</p><p>‘ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿಲ್ಲ. ಆದರೆ, ಅವರ ಸದಸ್ಯತ್ವವನ್ನು ಯಾಕೆ ರದ್ದುಗೊಳಿಸಬೇಕು ಎಂಬ ಕಾರಣ ಸಹಿತ ಈ ಸ್ವತಂತ್ರ ನಿರ್ಣಯದ ನೋಟಿಸ್ ಸಲ್ಲಿಸಿರುವೆ’ ಎಂದಿದ್ದಾರೆ.</p><p>ಸಂಸತ್ ಭವನ ಸಂಕೀರ್ಣದಲ್ಲಿ ಪಿಟಿಐ ವಿಡಿಯೊಸ್ ಜೊತೆ ಮಾತನಾಡಿದ ಅವರು,‘ಸೊರೋಸ್ ಫೌಂಡೇಷನ್, ಯುಎಸ್ಏಡ್, ಫೋರ್ಡ್ ಫೌಂಡೇಷನ್ ನೆರವಿನೊಂದಿಗೆ ರಾಹುಲ್ ಗಾಂಧಿ ಅದು ವಿದೇಶಗಳಿಗೆ ಭೇಟಿ ನೀಡುತ್ತಾರೆ. ಇದು ದೇಶ ವಿರೋಧಿ ಶಕ್ತಿಗಳೊಂದಿಗೆ ಸೇರಿ ಪಿತೂರಿ ನಡೆಸಿದಂತೆ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ.</p><p>‘ರಾಹುಲ್ ಗಾಂಧಿ ಥಾಯ್ಲೆಂಡ್, ವಿಯೆಟ್ನಾಂ, ಕಾಂಬೋಡಿಯಾಗೆ ಭೇಟಿ ನೀಡುತ್ತಾರೆ. ಅವರು ಕೈಗೊಳ್ಳುವ ಈ ಪ್ರವಾಸಗಳಿಗೆ ಮೇಲೆ ತಿಳಿಸಿದ ಸಂಸ್ಥೆ/ಸಂಘಟನೆಗಳು ನೆರವು ನೀಡುತ್ತವೆ’ ಎಂದು ಆರೋಪಿಸಿದರು.</p><p><strong>‘ನಮಗೆ ನೇಣು ಹಾಕುತ್ತೀರಾ?.. ನಾವು ಸಿದ್ಧ’</strong></p><p>‘ನಮ್ಮ ವಿರುದ್ಧ ಸಲ್ಲಿಸುವ ಯಾವುದೇ ನೋಟಿಸ್ಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನೀವು ನಮ್ಮನ್ನು ನೇಣಿಗೇರಿಸಲು ಬಯಸುತ್ತೀರಾ? ಅದಕ್ಕೂ ನಾವು ಸಿದ್ಧರಿದ್ದೇವೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ಹೇಳಿದರು.</p><p>ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ ಲೋಕಸಭಾ ಸದಸ್ವತ್ವ ರದ್ದುಗೊಳಿಸಬೇಕು ಎಂಬ ಬೇಡಿಕೆಯ ನೋಟಿಸ್ ಸಲ್ಲಿಸಿರುವ ಕುರಿತು ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.</p><p>ರಾಹುಲ್ ಗಾಂಧಿ ಅವರು ಸದನದಲ್ಲಿ ನೀಡಿದ ಕೆಲ ಹೇಳಿಕೆಗಳನ್ನು ಕಡತದಿಂದ ತೆಗೆದು ಹಾಕಿರುವುದನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವೇಣುಗೋಪಾಲ್‘ನಾವು ಎತ್ತಿದ ಪ್ರಶ್ನೆಗಳಿಗೆ ಸ್ಪೀಕರ್ ಅವರಿಂದ ಸಮರ್ಪಕ ಉತ್ತರ ಸಿಗದ ಕಾರಣ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ನೋಟಿಸ್ ಸಲ್ಲಿಸಿದ್ದೇವೆ’ ಎಂದರು.</p><p>‘ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಸಂಪೂರ್ಣವಾಗಿ ಕಡತದಿಂದ ತೆಗೆದು ಹಾಕಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಾತುಗಳನ್ನು ಕಡತದಿಂದ ತೆಗೆದು ಹಾಕಿಲ್ಲ. ಇದು ಕೇಂದ್ರ ಸರ್ಕಾರದ ದ್ವಂದ್ವ ನೀತಿಯಲ್ಲವೇ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದು ಮಾಡಬೇಕು ಹಾಗೂ ಅವರು ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.</p><p>ಈ ಸಂಬಂಧ, ತಮ್ಮ ಬೇಡಿಕೆಗಳನ್ನು ಒಳಗೊಂಡ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಸಲ್ಲಿಸಿದ್ದಾಗಿ ದುಬೆ ಗುರುವಾರ ಹೇಳಿದ್ದಾರೆ.</p><p>‘ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿಲ್ಲ. ಆದರೆ, ಅವರ ಸದಸ್ಯತ್ವವನ್ನು ಯಾಕೆ ರದ್ದುಗೊಳಿಸಬೇಕು ಎಂಬ ಕಾರಣ ಸಹಿತ ಈ ಸ್ವತಂತ್ರ ನಿರ್ಣಯದ ನೋಟಿಸ್ ಸಲ್ಲಿಸಿರುವೆ’ ಎಂದಿದ್ದಾರೆ.</p><p>ಸಂಸತ್ ಭವನ ಸಂಕೀರ್ಣದಲ್ಲಿ ಪಿಟಿಐ ವಿಡಿಯೊಸ್ ಜೊತೆ ಮಾತನಾಡಿದ ಅವರು,‘ಸೊರೋಸ್ ಫೌಂಡೇಷನ್, ಯುಎಸ್ಏಡ್, ಫೋರ್ಡ್ ಫೌಂಡೇಷನ್ ನೆರವಿನೊಂದಿಗೆ ರಾಹುಲ್ ಗಾಂಧಿ ಅದು ವಿದೇಶಗಳಿಗೆ ಭೇಟಿ ನೀಡುತ್ತಾರೆ. ಇದು ದೇಶ ವಿರೋಧಿ ಶಕ್ತಿಗಳೊಂದಿಗೆ ಸೇರಿ ಪಿತೂರಿ ನಡೆಸಿದಂತೆ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ.</p><p>‘ರಾಹುಲ್ ಗಾಂಧಿ ಥಾಯ್ಲೆಂಡ್, ವಿಯೆಟ್ನಾಂ, ಕಾಂಬೋಡಿಯಾಗೆ ಭೇಟಿ ನೀಡುತ್ತಾರೆ. ಅವರು ಕೈಗೊಳ್ಳುವ ಈ ಪ್ರವಾಸಗಳಿಗೆ ಮೇಲೆ ತಿಳಿಸಿದ ಸಂಸ್ಥೆ/ಸಂಘಟನೆಗಳು ನೆರವು ನೀಡುತ್ತವೆ’ ಎಂದು ಆರೋಪಿಸಿದರು.</p><p><strong>‘ನಮಗೆ ನೇಣು ಹಾಕುತ್ತೀರಾ?.. ನಾವು ಸಿದ್ಧ’</strong></p><p>‘ನಮ್ಮ ವಿರುದ್ಧ ಸಲ್ಲಿಸುವ ಯಾವುದೇ ನೋಟಿಸ್ಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನೀವು ನಮ್ಮನ್ನು ನೇಣಿಗೇರಿಸಲು ಬಯಸುತ್ತೀರಾ? ಅದಕ್ಕೂ ನಾವು ಸಿದ್ಧರಿದ್ದೇವೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ಹೇಳಿದರು.</p><p>ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ ಲೋಕಸಭಾ ಸದಸ್ವತ್ವ ರದ್ದುಗೊಳಿಸಬೇಕು ಎಂಬ ಬೇಡಿಕೆಯ ನೋಟಿಸ್ ಸಲ್ಲಿಸಿರುವ ಕುರಿತು ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.</p><p>ರಾಹುಲ್ ಗಾಂಧಿ ಅವರು ಸದನದಲ್ಲಿ ನೀಡಿದ ಕೆಲ ಹೇಳಿಕೆಗಳನ್ನು ಕಡತದಿಂದ ತೆಗೆದು ಹಾಕಿರುವುದನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವೇಣುಗೋಪಾಲ್‘ನಾವು ಎತ್ತಿದ ಪ್ರಶ್ನೆಗಳಿಗೆ ಸ್ಪೀಕರ್ ಅವರಿಂದ ಸಮರ್ಪಕ ಉತ್ತರ ಸಿಗದ ಕಾರಣ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ನೋಟಿಸ್ ಸಲ್ಲಿಸಿದ್ದೇವೆ’ ಎಂದರು.</p><p>‘ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಸಂಪೂರ್ಣವಾಗಿ ಕಡತದಿಂದ ತೆಗೆದು ಹಾಕಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಾತುಗಳನ್ನು ಕಡತದಿಂದ ತೆಗೆದು ಹಾಕಿಲ್ಲ. ಇದು ಕೇಂದ್ರ ಸರ್ಕಾರದ ದ್ವಂದ್ವ ನೀತಿಯಲ್ಲವೇ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>