<p><strong>ನವದೆಹಲಿ</strong>: ದೆಹಲಿ ಸೇವಾ ಕಾಯ್ದೆಯ ಅಗತ್ಯದ ಕುರಿತು ಜನರಿಗೆ ಮನದಟ್ಟು ಮಾಡಲು ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಕ್ಷೇತ್ರಗಳಿಗೆ ತೆರಳಲಿರುವ ಪ್ರಚಾರ ವಾಹನಗಳಿಗೆ ಮಂಗಳವಾರ ಇಲ್ಲಿ ಚಾಲನೆ ನೀಡಲಾಯಿತು.</p>.<p>‘ಏಳು ಪ್ರಚಾರ ವಾಹನಗಳು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಕಾಯ್ದೆಯನ್ನು ಯಾಕೆ ತರಲಾಗಿದೆ ಎಂಬುದರ ಕುರಿತು ವಿಡಿಯೊ ಪ್ರದರ್ಶಿಸಿ ಜನರಲ್ಲಿ ಅರಿವು ಮೂಡಿಸಲಿದೆ’ ಎಂದು ಬಿಜೆಪಿ ದೆಹಲಿ ಘಟಕ ಅಧ್ಯಕ್ಷ ವೀರೇಂದ್ರ ಸಚ್ದೇವ್ ಹೇಳಿದ್ದಾರೆ.</p>.<p>‘ಪಟ್ಟಭದ್ರ ಹಿತಾಸಕ್ತಿ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಅರವಿಂದ ಕೇಜ್ರಿವಾಲ್ ಸರ್ಕಾರದ ಹಿಡಿತದಿಂದ ದೆಹಲಿಯನ್ನು ರಕ್ಷಿಸಲು ಈ ಕಾಯ್ದೆ ಅಗತ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>ಸಂಸತ್ನ ಒಳಗೆ ಮತ್ತು ಹೊರಗಡೆ ಈ ಮಸೂದೆಯ ಬೆಂಬಲಿಸಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಮುಖಂಡರ ವಿಡಿಯೊಗಳನ್ನು ವಾಹನಗಳಿಗೆ ಅಳವಡಿಸಿರುವ ಪರದೆಯಲ್ಲಿ ಪ್ರದರ್ಶಿಸಲಾಗುವುದು ಎಂದಿದ್ದಾರೆ.</p>.<p>ದೆಹಲಿಯ ಬಿಜೆಪಿ ಸಂಸದರಾದ ಹರ್ಷವರ್ಧನ್, ರಮೇಶ್ ಬಿಧುರಿ ಮತ್ತು ಪರ್ವೇಶ್ ವರ್ಮಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p>ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯು ಈ ತಿಂಗಳ ಆರಂಭದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದಿತ್ತು. ಬಳಿಕ ಇದಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಸೇವಾ ಕಾಯ್ದೆಯ ಅಗತ್ಯದ ಕುರಿತು ಜನರಿಗೆ ಮನದಟ್ಟು ಮಾಡಲು ರಾಷ್ಟ್ರ ರಾಜಧಾನಿಯ ಏಳು ಲೋಕಸಭಾ ಕ್ಷೇತ್ರಗಳಿಗೆ ತೆರಳಲಿರುವ ಪ್ರಚಾರ ವಾಹನಗಳಿಗೆ ಮಂಗಳವಾರ ಇಲ್ಲಿ ಚಾಲನೆ ನೀಡಲಾಯಿತು.</p>.<p>‘ಏಳು ಪ್ರಚಾರ ವಾಹನಗಳು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಕಾಯ್ದೆಯನ್ನು ಯಾಕೆ ತರಲಾಗಿದೆ ಎಂಬುದರ ಕುರಿತು ವಿಡಿಯೊ ಪ್ರದರ್ಶಿಸಿ ಜನರಲ್ಲಿ ಅರಿವು ಮೂಡಿಸಲಿದೆ’ ಎಂದು ಬಿಜೆಪಿ ದೆಹಲಿ ಘಟಕ ಅಧ್ಯಕ್ಷ ವೀರೇಂದ್ರ ಸಚ್ದೇವ್ ಹೇಳಿದ್ದಾರೆ.</p>.<p>‘ಪಟ್ಟಭದ್ರ ಹಿತಾಸಕ್ತಿ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಅರವಿಂದ ಕೇಜ್ರಿವಾಲ್ ಸರ್ಕಾರದ ಹಿಡಿತದಿಂದ ದೆಹಲಿಯನ್ನು ರಕ್ಷಿಸಲು ಈ ಕಾಯ್ದೆ ಅಗತ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p>.<p>ಸಂಸತ್ನ ಒಳಗೆ ಮತ್ತು ಹೊರಗಡೆ ಈ ಮಸೂದೆಯ ಬೆಂಬಲಿಸಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಮುಖಂಡರ ವಿಡಿಯೊಗಳನ್ನು ವಾಹನಗಳಿಗೆ ಅಳವಡಿಸಿರುವ ಪರದೆಯಲ್ಲಿ ಪ್ರದರ್ಶಿಸಲಾಗುವುದು ಎಂದಿದ್ದಾರೆ.</p>.<p>ದೆಹಲಿಯ ಬಿಜೆಪಿ ಸಂಸದರಾದ ಹರ್ಷವರ್ಧನ್, ರಮೇಶ್ ಬಿಧುರಿ ಮತ್ತು ಪರ್ವೇಶ್ ವರ್ಮಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p>ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆಯು ಈ ತಿಂಗಳ ಆರಂಭದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರ ಪಡೆದಿತ್ತು. ಬಳಿಕ ಇದಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>