<p><strong>ಹೈದರಾಬಾದ್:</strong> ಕರೀಂನಗರ ನಗರ ಪಾಲಿಕೆಯ ಬಿಜೆಪಿ ಕಾರ್ಪೊರೇಟ್ಗಳಾದ ಕೊಲಗಾನಿ ಶ್ರೀನಿವಾಸ್ ಮತ್ತು ವೈ. ಸುನಿಲ್ ರಾವ್ ಅವರು ಮೇಯರ್ ಮತ್ತು ಉಪ ಮೇಯರ್ ಆಗಿ ಸೋಮವಾರ ಆಯ್ಕೆಯಾಗಿದ್ದಾರೆ.</p>.<p>ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಅವರು ಪ್ರತಿಕ್ರಿಯಿಸಿ, ‘ಪ್ರಜಾಪ್ರಭುತ್ವದ ತೀರ್ಪನ್ನು ಬುಡಮೇಲು ಮಾಡಲು ಕಾಂಗ್ರೆಸ್ ಮತ್ತು ಬಿಆರ್ಎಸ್ ಪಕ್ಷಗಳು ನಡೆಸಿದ ಎಲ್ಲಾ ಪ್ರಯತ್ನವನ್ನು ಸೋಲಿಸಿ, ಬಿಜೆಪಿ ಕರೀಂ ನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿದಿದೆ. ಈ ಮೂಲಕ ನಾವು ನಗರವನ್ನು ವಿಕಸಿತ ತೆಲಂಗಾಣ–ವಿಕಸಿತ ಭಾರತದತ್ತ ಪರಿವರ್ತಿಸಲಿದ್ದೇವೆ’ ಎಂದು ಹೇಳಿದ್ದಾರೆ.</p>.<p>66 ಸ್ಥಾನಗಳಿರುವ ಕರೀಂನಗರ ಪಾಲಿಕೆಯಲ್ಲಿ ಬಿಜೆಪಿ 30 ಸ್ಥಾನಗಳನ್ನು ಗೆದ್ದು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಮತ್ತೊಂದೆಡೆ, ಕಾಂಗ್ರೆಸ್–14, ಬಿಆರ್ಎಸ್–9, ಎಐಎಂಐಎಂ–3, ಎಐಎಫ್ಬಿ–3 ಮತ್ತು ಪಕ್ಷೇತರರು 7 ಸ್ಥಾನಗಳನ್ನು ಗೆದ್ದುಕೊಂಡಿದ್ದರು.</p>.<p>ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಕರೀಂನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕರೀಂನಗರ ನಗರ ಪಾಲಿಕೆಯ ಬಿಜೆಪಿ ಕಾರ್ಪೊರೇಟ್ಗಳಾದ ಕೊಲಗಾನಿ ಶ್ರೀನಿವಾಸ್ ಮತ್ತು ವೈ. ಸುನಿಲ್ ರಾವ್ ಅವರು ಮೇಯರ್ ಮತ್ತು ಉಪ ಮೇಯರ್ ಆಗಿ ಸೋಮವಾರ ಆಯ್ಕೆಯಾಗಿದ್ದಾರೆ.</p>.<p>ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಅವರು ಪ್ರತಿಕ್ರಿಯಿಸಿ, ‘ಪ್ರಜಾಪ್ರಭುತ್ವದ ತೀರ್ಪನ್ನು ಬುಡಮೇಲು ಮಾಡಲು ಕಾಂಗ್ರೆಸ್ ಮತ್ತು ಬಿಆರ್ಎಸ್ ಪಕ್ಷಗಳು ನಡೆಸಿದ ಎಲ್ಲಾ ಪ್ರಯತ್ನವನ್ನು ಸೋಲಿಸಿ, ಬಿಜೆಪಿ ಕರೀಂ ನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿದಿದೆ. ಈ ಮೂಲಕ ನಾವು ನಗರವನ್ನು ವಿಕಸಿತ ತೆಲಂಗಾಣ–ವಿಕಸಿತ ಭಾರತದತ್ತ ಪರಿವರ್ತಿಸಲಿದ್ದೇವೆ’ ಎಂದು ಹೇಳಿದ್ದಾರೆ.</p>.<p>66 ಸ್ಥಾನಗಳಿರುವ ಕರೀಂನಗರ ಪಾಲಿಕೆಯಲ್ಲಿ ಬಿಜೆಪಿ 30 ಸ್ಥಾನಗಳನ್ನು ಗೆದ್ದು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಮತ್ತೊಂದೆಡೆ, ಕಾಂಗ್ರೆಸ್–14, ಬಿಆರ್ಎಸ್–9, ಎಐಎಂಐಎಂ–3, ಎಐಎಫ್ಬಿ–3 ಮತ್ತು ಪಕ್ಷೇತರರು 7 ಸ್ಥಾನಗಳನ್ನು ಗೆದ್ದುಕೊಂಡಿದ್ದರು.</p>.<p>ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಕರೀಂನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>