‘ನಮ್ಮ ಮೊದಲ ಸಂಘರ್ಷ ಸಂವಿಧಾನದ ಉಳಿವಿಗಾಗಿ. ಬಿಜೆಪಿ ಹಾಗೂ ಆರ್ಎಸ್ಎಸ್ ಅದರ ಮೇಲೆ ದಾಳಿ ಮಾಡುತ್ತಿವೆ. ಯಾವ ಶಕ್ತಿಗೂ ಸಂವಿಧಾನವನ್ನು ಹರಿದು ಬಿಸಾಕುವ ಶಕ್ತಿ ಇಲ್ಲ’ ಎಂದು ರಾಹುಲ್ ನುಡಿದರು.
‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಪಡಿಸುವ ಕಾನೂನು ತರಲಿದ್ದೇವೆ. ಯುವಕರಿಗೆ ಉದ್ಯೋಗ ನೀಡಲಿದ್ದೇವೆ. ಅಗ್ನಿವೀರ್ ಯೋಜನೆಯನ್ನು ಕಸದ ತೊಟ್ಟಿಗೆ ಬಿಸಾಡಲಿದ್ದೇವೆ’ ಎಂದು ಹೇಳಿದರು.