<p><strong>ನವದೆಹಲಿ:</strong> ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲೂ ಏಕರೂಪದ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲು ಕ್ರಮವಹಿಸಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ರಾಜ್ಯಸಭೆಯಲ್ಲಿ ತಿಳಿಸಿದರು.</p>.<p>ಸಂವಿಧಾನ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅವರು ‘ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು’ ಮತ್ತು ‘ಅಧಿಕಾರದಲ್ಲಿ ಉಳಿಯಲು’ ಈ ಹಿಂದೆ ಕಾಂಗ್ರೆಸ್ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿತ್ತು ಎಂದು ವಾಗ್ದಾಳಿ ನಡೆಸಿದರು.</p>.<p>ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ‘ಖಾಸಗಿ ಆಸ್ತಿ’ ಎಂಬಂತೆ ನೋಡಿದೆ. ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಸಲುವಾಗಿ ಶೇ 50 ಮಿತಿಯನ್ನು ದಾಟಲು ಯತ್ನಿಸಿತ್ತು. ಆ ಪಕ್ಷವು ಎಂದಿಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡಲಿಲ್ಲ ಎಂದು ಆರೋಪಿಸಿದರು.</p>.<p>‘ಯುಸಿಸಿ ಕುರಿತಂತೆ ಪ್ರಸ್ತುತ ಕಾನೂನು ಮತ್ತು ಸಾಮಾಜಿಕ ಚರ್ಚೆ ನಡೆದಿದೆ. ಸಲಹೆಗಳೂ ಬರುತ್ತಿವೆ. ನಾವು ಕೆಲವನ್ನು ಒಪ್ಪಲೂಬಹುದು. ಆ ಬಳಿಕ ಪ್ರತಿ ರಾಜ್ಯದಲ್ಲೂ ಯುಸಿಸಿ ಅನ್ನು ಜಾರಿಗೆ ತರುತ್ತೇವೆ’ ಎಂದು ಪ್ರತಿಪಾದಿಸಿದರು.</p>.<p>ರಾಜ್ಯಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆಗೆ ಒಂದೂವರೆ ಗಂಟೆ ಕಾಲ ಉತ್ತರಿಸಿದ ಅವರು, 1973ರಿಂದ 2016ರವರೆಗೆ ಸುಪ್ರೀಂ ಕೋರ್ಟ್ ಮತ್ತು ರಾಜ್ಯಗಳಿಂದ ಯುಸಿಸಿ ಜಾರಿಗೆ 11 ಬಾರಿ ಸಲಹೆ ಬಂದಿತ್ತು. ಕಾಂಗ್ರೆಸ್ ನೇತೃತ್ವದ ಆಗಿನ ಸರ್ಕಾರ ಎಲ್ಲವನ್ನೂ ತಳ್ಳಿಹಾಕಿತ್ತು ಎಂದರು.</p>.<p>ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ಹೆಸರಿನಲ್ಲಿ ವಂಚಿಸಿದೆ. ನೆಹರೂ–ಗಾಂಧಿ ಕುಟುಂಬವು ಪಕ್ಷವನ್ನಷ್ಟೇ ಅಲ್ಲ, ಸಂವಿಧಾನವನ್ನೂ ಖಾಸಗಿ ಆಸ್ತಿ ಎಂಬಂತೆ ಪರಿಗಣಿಸಿತ್ತು. ಸಂಸತ್ತಿನ ಅನುಮೋದನೆ ಇಲ್ಲದೆ ವಿಧಿ 35ಎ ಸೇರಿಸಲಾಗಿತ್ತು ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲೂ ಏಕರೂಪದ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲು ಕ್ರಮವಹಿಸಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ರಾಜ್ಯಸಭೆಯಲ್ಲಿ ತಿಳಿಸಿದರು.</p>.<p>ಸಂವಿಧಾನ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅವರು ‘ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು’ ಮತ್ತು ‘ಅಧಿಕಾರದಲ್ಲಿ ಉಳಿಯಲು’ ಈ ಹಿಂದೆ ಕಾಂಗ್ರೆಸ್ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿತ್ತು ಎಂದು ವಾಗ್ದಾಳಿ ನಡೆಸಿದರು.</p>.<p>ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ‘ಖಾಸಗಿ ಆಸ್ತಿ’ ಎಂಬಂತೆ ನೋಡಿದೆ. ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸುವ ಸಲುವಾಗಿ ಶೇ 50 ಮಿತಿಯನ್ನು ದಾಟಲು ಯತ್ನಿಸಿತ್ತು. ಆ ಪಕ್ಷವು ಎಂದಿಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡಲಿಲ್ಲ ಎಂದು ಆರೋಪಿಸಿದರು.</p>.<p>‘ಯುಸಿಸಿ ಕುರಿತಂತೆ ಪ್ರಸ್ತುತ ಕಾನೂನು ಮತ್ತು ಸಾಮಾಜಿಕ ಚರ್ಚೆ ನಡೆದಿದೆ. ಸಲಹೆಗಳೂ ಬರುತ್ತಿವೆ. ನಾವು ಕೆಲವನ್ನು ಒಪ್ಪಲೂಬಹುದು. ಆ ಬಳಿಕ ಪ್ರತಿ ರಾಜ್ಯದಲ್ಲೂ ಯುಸಿಸಿ ಅನ್ನು ಜಾರಿಗೆ ತರುತ್ತೇವೆ’ ಎಂದು ಪ್ರತಿಪಾದಿಸಿದರು.</p>.<p>ರಾಜ್ಯಸಭೆಯಲ್ಲಿ ಸಂವಿಧಾನ ಕುರಿತ ಚರ್ಚೆಗೆ ಒಂದೂವರೆ ಗಂಟೆ ಕಾಲ ಉತ್ತರಿಸಿದ ಅವರು, 1973ರಿಂದ 2016ರವರೆಗೆ ಸುಪ್ರೀಂ ಕೋರ್ಟ್ ಮತ್ತು ರಾಜ್ಯಗಳಿಂದ ಯುಸಿಸಿ ಜಾರಿಗೆ 11 ಬಾರಿ ಸಲಹೆ ಬಂದಿತ್ತು. ಕಾಂಗ್ರೆಸ್ ನೇತೃತ್ವದ ಆಗಿನ ಸರ್ಕಾರ ಎಲ್ಲವನ್ನೂ ತಳ್ಳಿಹಾಕಿತ್ತು ಎಂದರು.</p>.<p>ಕಳೆದ 75 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನದ ಹೆಸರಿನಲ್ಲಿ ವಂಚಿಸಿದೆ. ನೆಹರೂ–ಗಾಂಧಿ ಕುಟುಂಬವು ಪಕ್ಷವನ್ನಷ್ಟೇ ಅಲ್ಲ, ಸಂವಿಧಾನವನ್ನೂ ಖಾಸಗಿ ಆಸ್ತಿ ಎಂಬಂತೆ ಪರಿಗಣಿಸಿತ್ತು. ಸಂಸತ್ತಿನ ಅನುಮೋದನೆ ಇಲ್ಲದೆ ವಿಧಿ 35ಎ ಸೇರಿಸಲಾಗಿತ್ತು ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>