<p><strong>ವಯನಾಡ್:</strong> ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರವೊಂದು ಸಂವಿಧಾನ ಮತ್ತು ಪ್ರಜಾಭುತ್ವವನ್ನು ದುರ್ಬಲಗೊಳಿಸಲು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ಕೇರಳದ ಏರನಾಡ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ‘ಇಂದು ನಾವು ಹೋರಾಡುತ್ತಿರುವುದು ಕೇವಲ ನಮ್ಮ ರಾಜಕೀಯಕ್ಕಾಗಿ ಅಥವಾ ನಮ್ಮ ಸಿದ್ಧಾಂತಕ್ಕಾಗಿ ಅಲ್ಲ, ಈ ಹೋರಾಟ ದೇಶದ ಮೂಲಸತ್ವವನ್ನು ರಕ್ಷಿಸಲು ಮತ್ತು ನಮ್ಮ ರಾಷ್ಟ್ರವನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ ಎನ್ನುವುದನ್ನು ನೀವು ಅರ್ಥಮಾಡಿಕೊಳ್ಳಬೇಕು’ ಎಂದರು.</p><p>ವಯನಾಡ್ನಲ್ಲಿ ನಡೆಯುತ್ತಿರುವ ಮಾನವ– ಪ್ರಾಣಿ ಸಂಘರ್ಷದ ಕುರಿತು ಮಾತನಾಡಿ, ‘ಸುಧಾರಿತ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು, ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ’ ಎಂದರು.</p><p>‘ಪ್ರಾಣಿಗಳು ಮಾನವರ ಮೇಲೆ ನಡೆಸುತ್ತಿರುವ ದಾಳಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪರಿಹಾರ ನೀಡಲಾಗುವುದು. ಅಲ್ಲದೆ, ಅರಣ್ಯ ಸಿಬ್ಬಂದಿ ಸೇರಿ ಕಾಡಿನಲ್ಲಿ ಕೆಲಸ ಮಾಡುವ ಎಲ್ಲರಿಗೂ ಹೆಚ್ಚಿನ ಭದ್ರತೆ ನೀಡುವಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಭರಸವೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್:</strong> ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರವೊಂದು ಸಂವಿಧಾನ ಮತ್ತು ಪ್ರಜಾಭುತ್ವವನ್ನು ದುರ್ಬಲಗೊಳಿಸಲು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p><p>ಕೇರಳದ ಏರನಾಡ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ‘ಇಂದು ನಾವು ಹೋರಾಡುತ್ತಿರುವುದು ಕೇವಲ ನಮ್ಮ ರಾಜಕೀಯಕ್ಕಾಗಿ ಅಥವಾ ನಮ್ಮ ಸಿದ್ಧಾಂತಕ್ಕಾಗಿ ಅಲ್ಲ, ಈ ಹೋರಾಟ ದೇಶದ ಮೂಲಸತ್ವವನ್ನು ರಕ್ಷಿಸಲು ಮತ್ತು ನಮ್ಮ ರಾಷ್ಟ್ರವನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ ಎನ್ನುವುದನ್ನು ನೀವು ಅರ್ಥಮಾಡಿಕೊಳ್ಳಬೇಕು’ ಎಂದರು.</p><p>ವಯನಾಡ್ನಲ್ಲಿ ನಡೆಯುತ್ತಿರುವ ಮಾನವ– ಪ್ರಾಣಿ ಸಂಘರ್ಷದ ಕುರಿತು ಮಾತನಾಡಿ, ‘ಸುಧಾರಿತ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು, ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ’ ಎಂದರು.</p><p>‘ಪ್ರಾಣಿಗಳು ಮಾನವರ ಮೇಲೆ ನಡೆಸುತ್ತಿರುವ ದಾಳಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪರಿಹಾರ ನೀಡಲಾಗುವುದು. ಅಲ್ಲದೆ, ಅರಣ್ಯ ಸಿಬ್ಬಂದಿ ಸೇರಿ ಕಾಡಿನಲ್ಲಿ ಕೆಲಸ ಮಾಡುವ ಎಲ್ಲರಿಗೂ ಹೆಚ್ಚಿನ ಭದ್ರತೆ ನೀಡುವಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಭರಸವೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>