<p><strong>ಲಖನೌ</strong>: ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬದಲು ತನ್ನ ಗುಪ್ತ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ತೊಡಗಿಕೊಂಡಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.</p><p>ತಮ್ಮ ಪಕ್ಷದ ಯುವ ಘಟಕದ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಕೇಂದ್ರ ಸರ್ಕಾರವು ಅಗತ್ಯ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.</p><p>ಉದ್ಯೋಗ, ಮೀಸಲಾತಿ, ಭಯೋತ್ಪಾದನೆ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಹಿಂದೂ–ಮುಸ್ಲಿಂ ಮುಂತಾದ ಭಾವನಾತ್ಮಕ ವಿಷಯಗಳನ್ನು ಮುಂದೆ ತಂದು ಯುವಕರ ದಾರಿ ತಪ್ಪಿಸುತ್ತಿದೆ ಎಂದರು.</p><p>ಬಿಜೆಪಿ ಸರ್ಕಾರಗಳು ಉತ್ತಮ ವೃತ್ತಿಪರ ಕೋರ್ಸ್ ಪದವಿ ಪಡೆದವರನ್ನೂ ಡೆಲಿವರಿ ಬಾಯ್ಗಳನ್ನಾಗಿ ಮಾಡುತ್ತಿದ್ದಾರೆ. ಇಂತಹ ವಿಷಯಗಳು ಮುನ್ನೆಲೆಗೆ ಬರಬಾರದೆಂದು ಮತ್ತು ತನ್ನ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ಬಿಜೆಪಿ ನಾಟಕ ಮಾಡುತ್ತದೆ ಎಂದಿದ್ದಾರೆ.</p><p>ಬಿಜೆಪಿ ಸರ್ಕಾರವು ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಮೀಸಲಾತಿ ನೀತಿಗಳನ್ನು ಹಾಳು ಮಾಡುತ್ತಿದೆ ಎಂದು ಯಾದವ್ ಆರೋಪಿಸಿದ್ದಾರೆ. ಶಿಕ್ಷಣದಲ್ಲಿ ಬಹಳಷ್ಟು ರಾಜಕೀಯ ಹಸ್ತಕ್ಷೇಪ ನಡೆದಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಬದಲು ತನ್ನ ಗುಪ್ತ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ತೊಡಗಿಕೊಂಡಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.</p><p>ತಮ್ಮ ಪಕ್ಷದ ಯುವ ಘಟಕದ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಖಿಲೇಶ್ ಯಾದವ್, ಕೇಂದ್ರ ಸರ್ಕಾರವು ಅಗತ್ಯ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.</p><p>ಉದ್ಯೋಗ, ಮೀಸಲಾತಿ, ಭಯೋತ್ಪಾದನೆ ಮುಂತಾದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಹಿಂದೂ–ಮುಸ್ಲಿಂ ಮುಂತಾದ ಭಾವನಾತ್ಮಕ ವಿಷಯಗಳನ್ನು ಮುಂದೆ ತಂದು ಯುವಕರ ದಾರಿ ತಪ್ಪಿಸುತ್ತಿದೆ ಎಂದರು.</p><p>ಬಿಜೆಪಿ ಸರ್ಕಾರಗಳು ಉತ್ತಮ ವೃತ್ತಿಪರ ಕೋರ್ಸ್ ಪದವಿ ಪಡೆದವರನ್ನೂ ಡೆಲಿವರಿ ಬಾಯ್ಗಳನ್ನಾಗಿ ಮಾಡುತ್ತಿದ್ದಾರೆ. ಇಂತಹ ವಿಷಯಗಳು ಮುನ್ನೆಲೆಗೆ ಬರಬಾರದೆಂದು ಮತ್ತು ತನ್ನ ಕಾರ್ಯಸೂಚಿಯನ್ನು ಪ್ರಚಾರ ಮಾಡಲು ಬಿಜೆಪಿ ನಾಟಕ ಮಾಡುತ್ತದೆ ಎಂದಿದ್ದಾರೆ.</p><p>ಬಿಜೆಪಿ ಸರ್ಕಾರವು ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ ಮತ್ತು ಮೀಸಲಾತಿ ನೀತಿಗಳನ್ನು ಹಾಳು ಮಾಡುತ್ತಿದೆ ಎಂದು ಯಾದವ್ ಆರೋಪಿಸಿದ್ದಾರೆ. ಶಿಕ್ಷಣದಲ್ಲಿ ಬಹಳಷ್ಟು ರಾಜಕೀಯ ಹಸ್ತಕ್ಷೇಪ ನಡೆದಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>