<p><strong>ಜೈಪುರ</strong>: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಆರೋಪಿಸಿದ್ದಾರೆ.</p><p>ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿಲ್ಲ ಎಂದು ಟೀಕಿಸಿರುವ ಅವರು, 'ಪಕ್ಷದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ' ಎಂದು ಗುರುವಾರ ಹೇಳಿದ್ದಾರೆ.</p><p>ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಪುರಸಭೆಗಳ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ ನಿರ್ಧರಿಸಲಾಗುತ್ತಿದೆ ಎಂದು ದೂರಿದ್ದಾರೆ.</p><p>ಭಾರತ – ಪಾಕಿಸ್ತಾನ ಸಂಘರ್ಷದ ಕುರಿತೂ ಮಾತನಾಡಿರುವ ಪೈಲಟ್, ಮೂರನೇ ವ್ಯಕ್ತಿ (ಅಮೆರಿಕ ಅಧ್ಯಕ್ಷ) ಕದನ ವಿರಾಮವನ್ನು ಘೋಷಿಸಿರುವುದು ಅನಿರೀಕ್ಷಿತವಾಗಿತ್ತು ಎಂದಿದ್ದಾರೆ.</p><p>ಕದನ ವಿರಾಮ ಘೋಷಣೆಯಲ್ಲಿ ತಮ್ಮ ಪಾತ್ರವಿದೆ ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳಿಕೊಂಡಿದ್ದಾರೆ. ಆದಾಗ್ಯೂ, ಅದನ್ನು ಕೇಂದ್ರ ಸರ್ಕಾರವು ಅಲ್ಲಗಳೆಯದಿರುವುದು, ಹೇಳಿಕೆಯನ್ನು ದೃಢೀಕರಿಸಿದಂತೆ ಆಗಿದೆ ಎಂದು ಪ್ರತಿಪಾದಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ'ವನ್ನು ಶ್ಲಾಘಿಸಿದ ಪೈಲಟ್, ಸಂಘರ್ಷದ ವೇಳೆ ಮಡಿದವರಿಗೆ ಗೌರವ ಸಲ್ಲಿಸಿದ್ದಾರೆ.</p>.'ಆಪರೇಷನ್ ಸಿಂಧೂರ' ಬತ್ತಳಿಕೆಯ ಒಂದು ಬಾಣವಷ್ಟೇ, ಸಮರ ಮುಗಿದಿಲ್ಲ: ಮೋದಿ.ಭಾರತ-ಪಾಕ್ ಯುದ್ಧವನ್ನು ವ್ಯಾಪಾರ ಮುಂದಿಟ್ಟುಕೊಂಡು ನಿಲ್ಲಿಸಿದೆ: ಟ್ರಂಪ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಆರೋಪಿಸಿದ್ದಾರೆ.</p><p>ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿಲ್ಲ ಎಂದು ಟೀಕಿಸಿರುವ ಅವರು, 'ಪಕ್ಷದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ' ಎಂದು ಗುರುವಾರ ಹೇಳಿದ್ದಾರೆ.</p><p>ಆಡಳಿತ ಪಕ್ಷಕ್ಕೆ ಅನುಕೂಲವಾಗುವಂತೆ ಪುರಸಭೆಗಳ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ ನಿರ್ಧರಿಸಲಾಗುತ್ತಿದೆ ಎಂದು ದೂರಿದ್ದಾರೆ.</p><p>ಭಾರತ – ಪಾಕಿಸ್ತಾನ ಸಂಘರ್ಷದ ಕುರಿತೂ ಮಾತನಾಡಿರುವ ಪೈಲಟ್, ಮೂರನೇ ವ್ಯಕ್ತಿ (ಅಮೆರಿಕ ಅಧ್ಯಕ್ಷ) ಕದನ ವಿರಾಮವನ್ನು ಘೋಷಿಸಿರುವುದು ಅನಿರೀಕ್ಷಿತವಾಗಿತ್ತು ಎಂದಿದ್ದಾರೆ.</p><p>ಕದನ ವಿರಾಮ ಘೋಷಣೆಯಲ್ಲಿ ತಮ್ಮ ಪಾತ್ರವಿದೆ ಎಂಬುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳಿಕೊಂಡಿದ್ದಾರೆ. ಆದಾಗ್ಯೂ, ಅದನ್ನು ಕೇಂದ್ರ ಸರ್ಕಾರವು ಅಲ್ಲಗಳೆಯದಿರುವುದು, ಹೇಳಿಕೆಯನ್ನು ದೃಢೀಕರಿಸಿದಂತೆ ಆಗಿದೆ ಎಂದು ಪ್ರತಿಪಾದಿಸಿದ್ದಾರೆ.</p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ'ವನ್ನು ಶ್ಲಾಘಿಸಿದ ಪೈಲಟ್, ಸಂಘರ್ಷದ ವೇಳೆ ಮಡಿದವರಿಗೆ ಗೌರವ ಸಲ್ಲಿಸಿದ್ದಾರೆ.</p>.'ಆಪರೇಷನ್ ಸಿಂಧೂರ' ಬತ್ತಳಿಕೆಯ ಒಂದು ಬಾಣವಷ್ಟೇ, ಸಮರ ಮುಗಿದಿಲ್ಲ: ಮೋದಿ.ಭಾರತ-ಪಾಕ್ ಯುದ್ಧವನ್ನು ವ್ಯಾಪಾರ ಮುಂದಿಟ್ಟುಕೊಂಡು ನಿಲ್ಲಿಸಿದೆ: ಟ್ರಂಪ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>