<p><strong>ಧರ್ಮಪುರಿ (ತಮಿಳುನಾಡು):</strong> ಲೋಕಸಭಾ ಚುನಾವಣೆ ಸೋಲಿನಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ ಎಂದು ಹೇಳಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರ ಹಣ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.</p>.<p>‘ಮಕ್ಕಳುಡನ್ ಮುದಲ್ವರ್’ (ಜನರೊಂದಿಗೆ ಸಿಎಂ) ಅನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡಿದ ಸ್ಟಾಲಿನ್, ಈ ಯೋಜನೆಯ ಮೂಲಕ ರಾಜ್ಯದ ಯಾರಿಗೂ ಯಾವುದೇ ಕುಂದುಕೊರತೆ ಉಂಟಾಗದಂತೆ ನೋಡಿಕೊಳ್ಳಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.</p><p>ಜನರಿಗಾಗಿ ಇಂತಹ ಬದ್ಧತೆಯ ಕೆಲಸ ಮಾಡುತ್ತಿರುವುದರಿಂದ ವಿರೋಧ ಪಕ್ಷಗಳಿಗೆ ಅಸೂಯೆ ಮತ್ತು ಕಿರಿಕಿರಿ ಉಂಟಾಗುತ್ತಿದೆ. ಆದ್ದರಿಂದಲೇ ಅಪಪ್ರಚಾರದ ಮೂಲಕ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p><p>ಕೇಂದ್ರ ಬಿಜೆಪಿ ಸರ್ಕಾರ 2024ರ ಲೋಕಸಭಾ ಚುನಾವಣೆ ಸೋಲು ಮತ್ತು ರಾಜ್ಯದಲ್ಲಿ ಹಿಂದಿನ ಚುನಾವಣೆಗಳಲ್ಲಿನ ನಿರಂತರ ಸೋಲುಗಳಿಂದ ಪಾಠ ಕಲಿತಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.</p><p>ಚೆನ್ನೈನಲ್ಲಿ ಮೆಟ್ರೊ ರೈಲು ಹಂತ–2 ಸೇರಿದಂತೆ ತಮಿಳುನಾಡಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವ ಮನಸ್ಸನ್ನು ಕೇಂದ್ರ ಸರ್ಕಾರ ಹೊಂದಿಲ್ಲ. ಕಳೆದ 10 ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಯಾವುದೇ ದೊಡ್ಡ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ನಾವು ಜನರೊಂದಿಗೆ ಇದ್ದೇವೆ ಮತ್ತು ಜನರು ನಮ್ಮೊಂದಿಗಿದ್ದಾರೆ. ಇದು ನಮ್ಮ ಯಶಸ್ಸಿನ ಗುಟ್ಟು ಮತ್ತು ತಮಿಳುನಾಡಿನ ಪ್ರಗತಿಯ ರಹಸ್ಯವಾಗಿದೆ’ ಎಂದು ಸ್ಟಾಲಿನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರಿ (ತಮಿಳುನಾಡು):</strong> ಲೋಕಸಭಾ ಚುನಾವಣೆ ಸೋಲಿನಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ ಎಂದು ಹೇಳಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರ ಹಣ ಮಂಜೂರು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.</p>.<p>‘ಮಕ್ಕಳುಡನ್ ಮುದಲ್ವರ್’ (ಜನರೊಂದಿಗೆ ಸಿಎಂ) ಅನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡಿದ ಸ್ಟಾಲಿನ್, ಈ ಯೋಜನೆಯ ಮೂಲಕ ರಾಜ್ಯದ ಯಾರಿಗೂ ಯಾವುದೇ ಕುಂದುಕೊರತೆ ಉಂಟಾಗದಂತೆ ನೋಡಿಕೊಳ್ಳಲು ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.</p><p>ಜನರಿಗಾಗಿ ಇಂತಹ ಬದ್ಧತೆಯ ಕೆಲಸ ಮಾಡುತ್ತಿರುವುದರಿಂದ ವಿರೋಧ ಪಕ್ಷಗಳಿಗೆ ಅಸೂಯೆ ಮತ್ತು ಕಿರಿಕಿರಿ ಉಂಟಾಗುತ್ತಿದೆ. ಆದ್ದರಿಂದಲೇ ಅಪಪ್ರಚಾರದ ಮೂಲಕ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p><p>ಕೇಂದ್ರ ಬಿಜೆಪಿ ಸರ್ಕಾರ 2024ರ ಲೋಕಸಭಾ ಚುನಾವಣೆ ಸೋಲು ಮತ್ತು ರಾಜ್ಯದಲ್ಲಿ ಹಿಂದಿನ ಚುನಾವಣೆಗಳಲ್ಲಿನ ನಿರಂತರ ಸೋಲುಗಳಿಂದ ಪಾಠ ಕಲಿತಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.</p><p>ಚೆನ್ನೈನಲ್ಲಿ ಮೆಟ್ರೊ ರೈಲು ಹಂತ–2 ಸೇರಿದಂತೆ ತಮಿಳುನಾಡಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವ ಮನಸ್ಸನ್ನು ಕೇಂದ್ರ ಸರ್ಕಾರ ಹೊಂದಿಲ್ಲ. ಕಳೆದ 10 ವರ್ಷಗಳ ಆಡಳಿತದಲ್ಲಿ ರಾಜ್ಯದಲ್ಲಿ ಯಾವುದೇ ದೊಡ್ಡ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ನಾವು ಜನರೊಂದಿಗೆ ಇದ್ದೇವೆ ಮತ್ತು ಜನರು ನಮ್ಮೊಂದಿಗಿದ್ದಾರೆ. ಇದು ನಮ್ಮ ಯಶಸ್ಸಿನ ಗುಟ್ಟು ಮತ್ತು ತಮಿಳುನಾಡಿನ ಪ್ರಗತಿಯ ರಹಸ್ಯವಾಗಿದೆ’ ಎಂದು ಸ್ಟಾಲಿನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>