ಪದೇ ಪದೇ ಮುಖ್ಯಮಂತ್ರಿಗಳನ್ನು ಬದಲಾಯಿಸುತ್ತಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ಬಗೆಹರಿಸಲು ಏನನ್ನೂ ಮಾಡಿಲ್ಲ. ಈ ಮೂಲಕ ಇಡೀ ರಾಜ್ಯವನ್ನು ಅವಮಾನಿಸಿದೆ. ಜನರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಅಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇವಭೂಮಿಯನ್ನು ಅವಮಾನಿಸಲಾಗಿದ್ದು, ಬಿಜೆಪಿ ರಾಜಕೀಯ ಅರಾಜಕತೆ ಸೃಷ್ಟಿ ಮಾಡಿದೆ ಎಂದು ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ 'ಡಬಲ್ ಎಂಜಿನ್' ಸರ್ಕಾರದ ಭರವಸೆ ನೀಡಿದ್ದರು. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಪದವಿಯ ಬದಲಾವಣೆ ಮಾತ್ರ ಆಗುತ್ತಿದೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದೆ.