<p><strong>ನವದೆಹೆಲಿ:</strong> ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಎಲ್ಲಾ ಲೋಕಸಭೆ ಸದಸ್ಯರಿಗೆ ಸದನದಲ್ಲಿ ಹಾಜರಿರುವಂತೆ ವಿಪ್ ಅನ್ನು ಜಾರಿಗೊಳಿಸಿದೆ. </p><p>ಲೋಕಸಭೆಯ ಸಂಸದರಿಗೆ ಆಗಸ್ಟ್ 7ರಿಂದ ಆಗಸ್ಟ್ 11ರ ವರೆಗೆ ಸದನದಲ್ಲಿ ಹಾಜರಾಗಲು ಮತ್ತು ಸರ್ಕಾರದ ನಿಲುವು ಮತ್ತು ಮಸೂದೆಗಳನ್ನು ಬೆಂಬಲಿಸಲು ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ. </p>.<p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಆಗಸ್ಟ್ 8ರಿಂದ 10ರ ವರೆಗೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ. ಚರ್ಚೆಯ ಕೊನೆಯ ದಿನ ಆಗಸ್ಟ್ 10ರಂದು ಪ್ರಧಾನಿ ಮೋದಿ ಉತ್ತರ ನೀಡುವ ಸಾಧ್ಯತೆ ಇದೆ.</p><p>ಮಂಗಳವಾರ ನಡೆದ ಲೋಕಸಭೆಯ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಆದರೆ, ತಾವು ಮಂಡಿಸಿದ ಅವಿಶ್ವಾಸ ನಿರ್ಣಯ ಕುರಿತು ಆದ್ಯತೆ ಮೇಲೆ ಚರ್ಚೆಯನ್ನು ಕೈಗೆತ್ತಿಕೊಳ್ಳದಿರುವುದನ್ನು ಪ್ರತಿಭಟಿಸಿ ‘ಇಂಡಿಯಾ’ ಮೈತ್ರಿಕೂಟದ ಅಂಗಪಕ್ಷಗಳು ಸಮಿತಿ ಸಭೆಯಿಂದ ಹೊರ ನಡೆದವು.</p><p>ಸಮಿತಿ ಸಭೆಯಲ್ಲಿ ಮಾತನಾಡಿದ ‘ಇಂಡಿಯಾ’ದ ಅಂಗಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಎಡಪಕ್ಷಗಳು ಮತ್ತು ಟಿಎಂಸಿ ಹಾಗೂ ಬಿಆರ್ಎಸ್ ನಾಯಕರು, ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯನ್ನು ಬಿಟ್ಟು ಸರ್ಕಾರವು ಈ ವಾರ ತನ್ನ ಶಾಸಕಾಂಗದ ಕಾರ್ಯಸೂಚಿಯನ್ನೇ ಪ್ರಸ್ತಾಪಿಸುತ್ತಿದೆ ಎಂದು ಟೀಕಿಸಿದ್ದರು.</p><p>‘ಆಗಸ್ಟ್ 8ರಂದು ಅವಿಶ್ವಾಸ ನಿರ್ಣಯ ಕುರಿತು ಚರ್ಚೆ ಆರಂಭಿಸುವ ತೀರ್ಮಾನಕ್ಕೆ ನಾವು ಒಪ್ಪಿಗೆ ನೀಡಬೇಕು ಎಂಬುದು ಸರ್ಕಾರದ ನಿಲುವಾಗಿತ್ತು. ಇದನ್ನು ಪ್ರತಿಭಟಿಸಿ ಕಲಾಪ ಸಲಹಾ ಸಮಿತಿ ಸಭೆಯಿಂದ ಹೊರನಡೆದೆವು’ ಎಂದು ಡಿಎಂಕೆ ನಾಯಕ ಟಿ.ಆರ್.ಬಾಲು ಹೇಳಿದರು.</p><p>ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕು ಎಂದು ಪ್ರತಿಪಾದಿಸುತ್ತಿರುವ ಪ್ರತಿಪಕ್ಷಗಳು, ಈ ವಿಷಯವಾಗಿ ಈ ಮೊದಲಿನ ನಿದರ್ಶನಗಳನ್ನು ಹಾಗೂ ನಿಯಮಗಳನ್ನು ಉಲ್ಲೇಖಿಸಿದ್ದಾರೆ.</p><p><strong>ಓದಿ... <a href="https://www.prajavani.net/news/india-news/lok-sabha-to-take-up-no-trust-motion-debate-on-aug-8-opposition-walks-out-of-bac-meet-in-protest-2421629">ವಿ</a></strong><a href="https://www.prajavani.net/news/india-news/lok-sabha-to-take-up-no-trust-motion-debate-on-aug-8-opposition-walks-out-of-bac-meet-in-protest-2421629">ರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ: 8ರಂದು ಲೋಕಸಭೆಯಲ್ಲಿ ಚರ್ಚೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹೆಲಿ:</strong> ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಎಲ್ಲಾ ಲೋಕಸಭೆ ಸದಸ್ಯರಿಗೆ ಸದನದಲ್ಲಿ ಹಾಜರಿರುವಂತೆ ವಿಪ್ ಅನ್ನು ಜಾರಿಗೊಳಿಸಿದೆ. </p><p>ಲೋಕಸಭೆಯ ಸಂಸದರಿಗೆ ಆಗಸ್ಟ್ 7ರಿಂದ ಆಗಸ್ಟ್ 11ರ ವರೆಗೆ ಸದನದಲ್ಲಿ ಹಾಜರಾಗಲು ಮತ್ತು ಸರ್ಕಾರದ ನಿಲುವು ಮತ್ತು ಮಸೂದೆಗಳನ್ನು ಬೆಂಬಲಿಸಲು ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ. </p>.<p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಆಗಸ್ಟ್ 8ರಿಂದ 10ರ ವರೆಗೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ. ಚರ್ಚೆಯ ಕೊನೆಯ ದಿನ ಆಗಸ್ಟ್ 10ರಂದು ಪ್ರಧಾನಿ ಮೋದಿ ಉತ್ತರ ನೀಡುವ ಸಾಧ್ಯತೆ ಇದೆ.</p><p>ಮಂಗಳವಾರ ನಡೆದ ಲೋಕಸಭೆಯ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಆದರೆ, ತಾವು ಮಂಡಿಸಿದ ಅವಿಶ್ವಾಸ ನಿರ್ಣಯ ಕುರಿತು ಆದ್ಯತೆ ಮೇಲೆ ಚರ್ಚೆಯನ್ನು ಕೈಗೆತ್ತಿಕೊಳ್ಳದಿರುವುದನ್ನು ಪ್ರತಿಭಟಿಸಿ ‘ಇಂಡಿಯಾ’ ಮೈತ್ರಿಕೂಟದ ಅಂಗಪಕ್ಷಗಳು ಸಮಿತಿ ಸಭೆಯಿಂದ ಹೊರ ನಡೆದವು.</p><p>ಸಮಿತಿ ಸಭೆಯಲ್ಲಿ ಮಾತನಾಡಿದ ‘ಇಂಡಿಯಾ’ದ ಅಂಗಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಎಡಪಕ್ಷಗಳು ಮತ್ತು ಟಿಎಂಸಿ ಹಾಗೂ ಬಿಆರ್ಎಸ್ ನಾಯಕರು, ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯನ್ನು ಬಿಟ್ಟು ಸರ್ಕಾರವು ಈ ವಾರ ತನ್ನ ಶಾಸಕಾಂಗದ ಕಾರ್ಯಸೂಚಿಯನ್ನೇ ಪ್ರಸ್ತಾಪಿಸುತ್ತಿದೆ ಎಂದು ಟೀಕಿಸಿದ್ದರು.</p><p>‘ಆಗಸ್ಟ್ 8ರಂದು ಅವಿಶ್ವಾಸ ನಿರ್ಣಯ ಕುರಿತು ಚರ್ಚೆ ಆರಂಭಿಸುವ ತೀರ್ಮಾನಕ್ಕೆ ನಾವು ಒಪ್ಪಿಗೆ ನೀಡಬೇಕು ಎಂಬುದು ಸರ್ಕಾರದ ನಿಲುವಾಗಿತ್ತು. ಇದನ್ನು ಪ್ರತಿಭಟಿಸಿ ಕಲಾಪ ಸಲಹಾ ಸಮಿತಿ ಸಭೆಯಿಂದ ಹೊರನಡೆದೆವು’ ಎಂದು ಡಿಎಂಕೆ ನಾಯಕ ಟಿ.ಆರ್.ಬಾಲು ಹೇಳಿದರು.</p><p>ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕು ಎಂದು ಪ್ರತಿಪಾದಿಸುತ್ತಿರುವ ಪ್ರತಿಪಕ್ಷಗಳು, ಈ ವಿಷಯವಾಗಿ ಈ ಮೊದಲಿನ ನಿದರ್ಶನಗಳನ್ನು ಹಾಗೂ ನಿಯಮಗಳನ್ನು ಉಲ್ಲೇಖಿಸಿದ್ದಾರೆ.</p><p><strong>ಓದಿ... <a href="https://www.prajavani.net/news/india-news/lok-sabha-to-take-up-no-trust-motion-debate-on-aug-8-opposition-walks-out-of-bac-meet-in-protest-2421629">ವಿ</a></strong><a href="https://www.prajavani.net/news/india-news/lok-sabha-to-take-up-no-trust-motion-debate-on-aug-8-opposition-walks-out-of-bac-meet-in-protest-2421629">ರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ: 8ರಂದು ಲೋಕಸಭೆಯಲ್ಲಿ ಚರ್ಚೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>