<p><strong>ಚಂಡೀಗಢ:</strong> ಮಂಗಳವಾರ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬಿಜೆಪಿ ಮುಖಂಡ ನಾಯಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಮನೋಹರಲಾಲ್ ಖಟ್ಟರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ, ಅವರ ಸಂಪುಟದ ಸದಸ್ಯರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. </p><p>ಬಿಜೆಪಿ ಮತ್ತು ಜೆಜೆಪಿ ನಡುವಿನ ಮೈತ್ರಿಯು ಅಂತ್ಯಗೊಳ್ಳುತ್ತಿದೆ ಎಂಬ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಬದಲಾವಣೆ ಆಗಿದೆ. ಈ ನಡುವೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಜೆಜೆಪಿ ಮುಖಂಡ ದುಷ್ಯಂತ್ ಚೌತಾಲ, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಇಷ್ಟು ದಿನಗಳ ಕಾಲ ಜನ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. </p><p>ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿವೆ. ಈ ಪೈಕಿ ಬಹುಮತಕ್ಕೆ 46 ಸಂಖ್ಯಾ ಬಲ ಬೇಕು. ಈಗಾಗಲೇ ಬಿಜೆಪಿ 41 ಶಾಸಕರನ್ನು ಹೊಂದಿದೆ. ಏಳು ಪಕ್ಷೇತರರ ಪೈಕಿ ಆರು ಜನರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.</p><p>10 ಶಾಸಕರನ್ನು ಹೊಂದಿರುವ ಜೆಜೆಪಿ ಬೆಂಬಲ ಇಲ್ಲದೆಯೇ ಬಿಜೆಪಿ ಅಧಿಕಾರ ಹಿಡಿಯಬಹುದು. ಇಲ್ಲಿಯವರೆಗೂ ಜೆಜೆಪಿ ಖಟ್ಟರ್ ಸರ್ಕಾರಕ್ಕೆ ಬೆಂಬಲ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಮಂಗಳವಾರ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬಿಜೆಪಿ ಮುಖಂಡ ನಾಯಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಮನೋಹರಲಾಲ್ ಖಟ್ಟರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ, ಅವರ ಸಂಪುಟದ ಸದಸ್ಯರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. </p><p>ಬಿಜೆಪಿ ಮತ್ತು ಜೆಜೆಪಿ ನಡುವಿನ ಮೈತ್ರಿಯು ಅಂತ್ಯಗೊಳ್ಳುತ್ತಿದೆ ಎಂಬ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಬದಲಾವಣೆ ಆಗಿದೆ. ಈ ನಡುವೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಜೆಜೆಪಿ ಮುಖಂಡ ದುಷ್ಯಂತ್ ಚೌತಾಲ, ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಇಷ್ಟು ದಿನಗಳ ಕಾಲ ಜನ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. </p><p>ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿವೆ. ಈ ಪೈಕಿ ಬಹುಮತಕ್ಕೆ 46 ಸಂಖ್ಯಾ ಬಲ ಬೇಕು. ಈಗಾಗಲೇ ಬಿಜೆಪಿ 41 ಶಾಸಕರನ್ನು ಹೊಂದಿದೆ. ಏಳು ಪಕ್ಷೇತರರ ಪೈಕಿ ಆರು ಜನರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.</p><p>10 ಶಾಸಕರನ್ನು ಹೊಂದಿರುವ ಜೆಜೆಪಿ ಬೆಂಬಲ ಇಲ್ಲದೆಯೇ ಬಿಜೆಪಿ ಅಧಿಕಾರ ಹಿಡಿಯಬಹುದು. ಇಲ್ಲಿಯವರೆಗೂ ಜೆಜೆಪಿ ಖಟ್ಟರ್ ಸರ್ಕಾರಕ್ಕೆ ಬೆಂಬಲ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>