ಈ ಬಗ್ಗೆ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಸ್ವಾಮಿ, ‘ಟಾಟಾ ಐಪಿಎಲ್ ಕ್ರಿಕೆಟ್ ಫಲಿತಾಂಶದಲ್ಲಿ ಮೋಸವಾಗಿದೆ ಎಂದು ಗುಪ್ತಚರ ಸಂಸ್ಥೆಗಳಲ್ಲಿ ವ್ಯಾಪಕವಾದ ಚರ್ಚೆ ನಡೆದಿದೆ. ಈ ಅನುಮಾನದ ನಿವಾರಣೆಗೆ ತನಿಖೆ ನಡೆಯಬೇಕಾಗಬಹುದು. ಆದರೆ, ಅಮಿತ್ ಶಾ ಅವರ ಪುತ್ರನೇ ಬಿಸಿಸಿಐನ ವಾಸ್ತವ ಸರ್ವಾಧಿಕಾರಿಯಾಗಿರುವುದರಿಂದ ಸರ್ಕಾರ ತನಿಖೆ ನಡೆಸುವುದಿಲ್ಲ. ಹಾಗಾಗಿ ಪಿಐಎಲ್ ಅಗತ್ಯವಾಗಬಹುದು’ ಎಂದು ಅವರು ಹೇಳಿದ್ದಾರೆ.