ಈ ಘಟನೆಯು ರಾಜಕೀಯ ಬಣ್ಣ ಪಡೆದುಕೊಂಡಿದ್ದು, ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿರುವ ತನ್ನ ಮುಖಂಡನನ್ನು ರಕ್ಷಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಸಂದೇಶ್ಖಾಲಿ ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಟಿಎಂಸಿ ನಡೆಸಿದ ಹುನ್ನಾರವಿದು ಎಂದು ಬಿಜೆಪಿ ತಿರುಗೇಟು ನೀಡಿದೆ.