<p><strong>ಶಿಮ್ಲಾ:</strong> ವೈದ್ಯಕೀಯ ಪರೀಕ್ಷೆ ನೆಪದಲ್ಲಿ ಇಪ್ಪತ್ತೈದು ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಿಮಾಚಲ ಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಸಹೋದರ, ಆಯುರ್ವೇದ ವೈದ್ಯ ರಾಮ್ ಕುಮಾರ್ ಬಿಂದಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ.</p>.<p>ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಅವರ ಹಿರಿಯ ಸಹೋದರ ರಾಮ್ ಕುಮಾರ್ ಅವರು ಅ. 7ರಂದು ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದು, ಸೋಲನ್ನಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಂತ್ರಸ್ತೆಯು ಅ. 8ರಂದು ಸೋಲನ್ನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಕುರಿತಂತೆ ಹೆಚ್ಚಿನ ತನಿಖೆ ನಡೆದಿದೆ ಎಂದು ಎಸ್ಪಿ ಗೌರವ್ ಸಿಂಗ್ ತಿಳಿಸಿದ್ದಾರೆ.</p>.<p>‘ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಆರೋಪ ಹೊತ್ತಿರುವ 78 ವರ್ಷದ ವ್ಯಕ್ತಿಯು ಸಾರ್ವಜನಿಕ ಬದುಕಿನಲ್ಲಿ ಪ್ರಭಾವ ಹೊಂದಿದ್ದಾರೆ. ಸನಾತನ ಧರ್ಮದ ಬಲವರ್ಧನೆಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಪ್ರಕರಣ ರಾಜಕೀಯ ಪ್ರೇರಿತ’ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲರ ಕರಣ್ ನಂದಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ವೈದ್ಯಕೀಯ ಪರೀಕ್ಷೆ ನೆಪದಲ್ಲಿ ಇಪ್ಪತ್ತೈದು ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಿಮಾಚಲ ಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಸಹೋದರ, ಆಯುರ್ವೇದ ವೈದ್ಯ ರಾಮ್ ಕುಮಾರ್ ಬಿಂದಾಲ್ ಅವರನ್ನು ಶುಕ್ರವಾರ ಬಂಧಿಸಲಾಗಿದೆ.</p>.<p>ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಅವರ ಹಿರಿಯ ಸಹೋದರ ರಾಮ್ ಕುಮಾರ್ ಅವರು ಅ. 7ರಂದು ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದು, ಸೋಲನ್ನಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸಂತ್ರಸ್ತೆಯು ಅ. 8ರಂದು ಸೋಲನ್ನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಕುರಿತಂತೆ ಹೆಚ್ಚಿನ ತನಿಖೆ ನಡೆದಿದೆ ಎಂದು ಎಸ್ಪಿ ಗೌರವ್ ಸಿಂಗ್ ತಿಳಿಸಿದ್ದಾರೆ.</p>.<p>‘ವೈದ್ಯಕೀಯ ವರದಿಗಾಗಿ ಕಾಯಲಾಗುತ್ತಿದೆ. ಆರೋಪ ಹೊತ್ತಿರುವ 78 ವರ್ಷದ ವ್ಯಕ್ತಿಯು ಸಾರ್ವಜನಿಕ ಬದುಕಿನಲ್ಲಿ ಪ್ರಭಾವ ಹೊಂದಿದ್ದಾರೆ. ಸನಾತನ ಧರ್ಮದ ಬಲವರ್ಧನೆಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಪ್ರಕರಣ ರಾಜಕೀಯ ಪ್ರೇರಿತ’ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲರ ಕರಣ್ ನಂದಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>