<p><strong>ಪಾಲಕ್ಕಾಡ್ :</strong> ರ್ಯಾಪರ್ ಮತ್ತು ಗೀತರಚನೆಕಾರ ವೇದನ್ (ಹಿರಣದಾಸ್ ಮುರಳಿ) ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪಾಲಕ್ಕಾಡ್ನ ಬಿಜೆಪಿ ನಾಯಕಿ ವಿ.ಎಸ್ ಮಿನಿಮೋಳ್ ಅವರು ದೂರು ನೀಡಿದ್ದಾರೆ. </p>.<p>ವೇದನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಕೇಂದ್ರ ಗೃಹ ಸಚಿವಾಲಯ ಮತ್ತು ಎನ್ಐಎಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.</p>.<p class="title">ವೇದನ್ ಅವರು ಸಂಗೀತದ ಮೂಲಕ ಜಾತಿ ಆಧರಿತ ವಿಭಜನೆಗೆ ಉತ್ತೇಜನ ನೀಡುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.</p>.<p>ಮಿನಿಮೋಳ್ ಅವರು ಪಾಲಕ್ಕಾಡ್ನ ಪುರಸಭೆ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. </p>.<p>ಐದು ವರ್ಷಗಳ ಹಿಂದೆ ಬಿಡುಗಡೆಯಾದ ‘ವಾಯ್ಸ್ ಆಫ್ ವಾಯ್ಸ್ಲೆಸ್’ ಶೀರ್ಷಿಕೆಯ ಹಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಗೌರವ ತೋರಿದ್ದಾರೆ ಮತ್ತು ಅವಹೇಳನ ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<p><span class="bold"><strong>ವೇದನ್ ಅವರು ಮಾದಕದ್ರವ್ಯ ಸೇವನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರೂ ದೊಡ್ಡ ಮಟ್ಟದಲ್ಲಿ ಸಂಗೀತ ಕಛೇರಿಗಳನ್ನು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಹಿಂಸಾಚಾರ ಮತ್ತು ದ್ವೇಷವನ್ನು ಹುರಿದುಂಬಿಸುತ್ತಿದ್ದಾರೆ. ವೇದನ್ ಅವರ ವಿರುದ್ಧ ದಾಖಲಾಗಿರುವ ಹಲವು ಪ್ರಕರಣಗಳ ಸಂಬಂಧ ಎನ್ಐಎ ತನಿಖೆ ನಡೆಯಬೇಕು ಎಂದು ಅವರು ಕೋರಿದ್ದಾರೆ.</strong></span></p>.<p><span class="bold"><strong>‘ದಲಿತ ವಿರೋಧಿ ಅಜೆಂಡಾ’:</strong></span></p>.<p>ಸಂಘ ಪರಿವಾರದ ದಲಿತ ವಿರೋಧಿ ಅಜೆಂಡವೇ ವೇದನ್ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲು ಕಾರಣ ಎಂದು ಸಿಪಿಎಂ ಮತ್ತು ಕಾಂಗ್ರೆಸ್ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲಕ್ಕಾಡ್ :</strong> ರ್ಯಾಪರ್ ಮತ್ತು ಗೀತರಚನೆಕಾರ ವೇದನ್ (ಹಿರಣದಾಸ್ ಮುರಳಿ) ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪಾಲಕ್ಕಾಡ್ನ ಬಿಜೆಪಿ ನಾಯಕಿ ವಿ.ಎಸ್ ಮಿನಿಮೋಳ್ ಅವರು ದೂರು ನೀಡಿದ್ದಾರೆ. </p>.<p>ವೇದನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಕೇಂದ್ರ ಗೃಹ ಸಚಿವಾಲಯ ಮತ್ತು ಎನ್ಐಎಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.</p>.<p class="title">ವೇದನ್ ಅವರು ಸಂಗೀತದ ಮೂಲಕ ಜಾತಿ ಆಧರಿತ ವಿಭಜನೆಗೆ ಉತ್ತೇಜನ ನೀಡುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.</p>.<p>ಮಿನಿಮೋಳ್ ಅವರು ಪಾಲಕ್ಕಾಡ್ನ ಪುರಸಭೆ ಸದಸ್ಯೆ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. </p>.<p>ಐದು ವರ್ಷಗಳ ಹಿಂದೆ ಬಿಡುಗಡೆಯಾದ ‘ವಾಯ್ಸ್ ಆಫ್ ವಾಯ್ಸ್ಲೆಸ್’ ಶೀರ್ಷಿಕೆಯ ಹಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಗೌರವ ತೋರಿದ್ದಾರೆ ಮತ್ತು ಅವಹೇಳನ ಮಾಡಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<p><span class="bold"><strong>ವೇದನ್ ಅವರು ಮಾದಕದ್ರವ್ಯ ಸೇವನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿದ್ದರೂ ದೊಡ್ಡ ಮಟ್ಟದಲ್ಲಿ ಸಂಗೀತ ಕಛೇರಿಗಳನ್ನು ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಹಿಂಸಾಚಾರ ಮತ್ತು ದ್ವೇಷವನ್ನು ಹುರಿದುಂಬಿಸುತ್ತಿದ್ದಾರೆ. ವೇದನ್ ಅವರ ವಿರುದ್ಧ ದಾಖಲಾಗಿರುವ ಹಲವು ಪ್ರಕರಣಗಳ ಸಂಬಂಧ ಎನ್ಐಎ ತನಿಖೆ ನಡೆಯಬೇಕು ಎಂದು ಅವರು ಕೋರಿದ್ದಾರೆ.</strong></span></p>.<p><span class="bold"><strong>‘ದಲಿತ ವಿರೋಧಿ ಅಜೆಂಡಾ’:</strong></span></p>.<p>ಸಂಘ ಪರಿವಾರದ ದಲಿತ ವಿರೋಧಿ ಅಜೆಂಡವೇ ವೇದನ್ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲು ಕಾರಣ ಎಂದು ಸಿಪಿಎಂ ಮತ್ತು ಕಾಂಗ್ರೆಸ್ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>