<p><strong>ಮುಂಬೈ:</strong> ‘ಮಳೆಯಾದಾಗ ಕಪ್ಪೆಗಳು ಹೊರಬರುವಂತೆ, ಚುನಾವಣೆಯ ಸಂದರ್ಭದಲ್ಲಿ ಮಾತ್ರ ಜರಾಂಗೆ ಅವರು ಕಾಣಿಸಿಕೊಳ್ಳುತ್ತಾರೆ ಎಂದು ಬಿಜೆಪಿ ಎಂಎಲ್ಸಿ ಪರಿಣಯ್ ಫುಕೆ ಅವರು ವಾಗ್ದಾಳಿ ನಡೆಸಿದ್ದಾರೆ.</p><p>ಮಹಾರಾಷ್ಟ್ರ ಸರ್ಕಾರವು ಮರಾಠ ಸಮುದಾಯಕ್ಕೆ ನೀಡಿದ್ದ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಮನೋಜ್ ಜರಾಂಗೆ ಅವರು ಆಗಸ್ಟ್ 29 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. </p><p>‘ಅವರು ಈಗ ಶರದ್ ಪವಾರ್ ಅವರ ಹಿಡಿತದಲ್ಲಿದ್ದಾರೆ, ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ’ ಎಂದು ಪರಿಣಯ್ ಫುಕೆ ಆರೋಪಿಸಿದ್ದಾರೆ.</p><p>ದೇವೇಂದ್ರ ಫಡಣವೀಸ್ ಅವರು ಮರಾಠರಿಗೆ ಮೀಸಲಾತಿ ನೀಡಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಜರಾಂಗೆ ಅವರಿಗೆ ಮರಾಠರಿಗೆ ಮೀಸಲಾತಿ ಸಿಗುವುದು ಬೇಕಾಗಿಲ್ಲ. ಮರಾಠ ಮತ್ತು ಇತರ ಸಮುದಾಯಗಳ ನಡುವೆ ಒಡಕು ಮೂಡಿಸುವ ಪ್ರಯತ್ನದಲ್ಲಿ ಅವರಿದ್ದಾರೆ ಎಂದಿದ್ದಾರೆ. </p><p>ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಸರ್ಕಾರದಲ್ಲಿರುವ ಎಲ್ಲಾ ಮರಾಠ ನಾಯಕರ ರಾಜಕೀಯ ಜೀವನವನ್ನು ಕೊನೆಗಾಣಿಸಲು ದೇವೇಂದ್ರ ಫಡಣವೀಸ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಳೆದ ವಾರವಷ್ಟೇ ಮನೋಜ್ ಜರಾಂಗೆ ಆರೋಪಿಸಿದ್ದರು. ಇದರ ನಂತರ ಹಲವು ಬಿಜೆಪಿ ನಾಯಕರು ಜರಾಂಗೆ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಮಳೆಯಾದಾಗ ಕಪ್ಪೆಗಳು ಹೊರಬರುವಂತೆ, ಚುನಾವಣೆಯ ಸಂದರ್ಭದಲ್ಲಿ ಮಾತ್ರ ಜರಾಂಗೆ ಅವರು ಕಾಣಿಸಿಕೊಳ್ಳುತ್ತಾರೆ ಎಂದು ಬಿಜೆಪಿ ಎಂಎಲ್ಸಿ ಪರಿಣಯ್ ಫುಕೆ ಅವರು ವಾಗ್ದಾಳಿ ನಡೆಸಿದ್ದಾರೆ.</p><p>ಮಹಾರಾಷ್ಟ್ರ ಸರ್ಕಾರವು ಮರಾಠ ಸಮುದಾಯಕ್ಕೆ ನೀಡಿದ್ದ ಭರವಸೆಗಳನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಮನೋಜ್ ಜರಾಂಗೆ ಅವರು ಆಗಸ್ಟ್ 29 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. </p><p>‘ಅವರು ಈಗ ಶರದ್ ಪವಾರ್ ಅವರ ಹಿಡಿತದಲ್ಲಿದ್ದಾರೆ, ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ’ ಎಂದು ಪರಿಣಯ್ ಫುಕೆ ಆರೋಪಿಸಿದ್ದಾರೆ.</p><p>ದೇವೇಂದ್ರ ಫಡಣವೀಸ್ ಅವರು ಮರಾಠರಿಗೆ ಮೀಸಲಾತಿ ನೀಡಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಜರಾಂಗೆ ಅವರಿಗೆ ಮರಾಠರಿಗೆ ಮೀಸಲಾತಿ ಸಿಗುವುದು ಬೇಕಾಗಿಲ್ಲ. ಮರಾಠ ಮತ್ತು ಇತರ ಸಮುದಾಯಗಳ ನಡುವೆ ಒಡಕು ಮೂಡಿಸುವ ಪ್ರಯತ್ನದಲ್ಲಿ ಅವರಿದ್ದಾರೆ ಎಂದಿದ್ದಾರೆ. </p><p>ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಸರ್ಕಾರದಲ್ಲಿರುವ ಎಲ್ಲಾ ಮರಾಠ ನಾಯಕರ ರಾಜಕೀಯ ಜೀವನವನ್ನು ಕೊನೆಗಾಣಿಸಲು ದೇವೇಂದ್ರ ಫಡಣವೀಸ್ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಳೆದ ವಾರವಷ್ಟೇ ಮನೋಜ್ ಜರಾಂಗೆ ಆರೋಪಿಸಿದ್ದರು. ಇದರ ನಂತರ ಹಲವು ಬಿಜೆಪಿ ನಾಯಕರು ಜರಾಂಗೆ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>