<p><strong>ನವದೆಹಲಿ</strong>: ‘ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಮುನಾ ನದಿ ಸ್ವಚ್ಛಗೊಳಿಸುವ ಭರವಸೆ ಈಡೇರಿಸಿಲ್ಲ’ ಎಂದು ಟೀಕಿಸಿರುವ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ, ಕೇಜ್ರಿವಾಲ್ ಪ್ರತಿಕೃತಿಯನ್ನು ನದಿಯಲ್ಲಿ ಮುಳುಗಿಸಿ ಶನಿವಾರ ಪ್ರತಿಭಟಿಸಿದರು.</p>.<p>ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ವರ್ಮಾ, ‘ಎಎಪಿ ಸರ್ಕಾರ ಸತತ 11 ವರ್ಷಗಳಿಂದ ಅಧಿಕಾರದಲ್ಲಿದೆ. ಸುಮಾರು ₹8000 ಕೋಟಿ ವ್ಯಯಿಸಿದೆ. ಆದರೆ, ನದಿ ಸ್ವಚ್ಛತೆಗೆ ಸಂಬಂಧಿಸಿದ ಭರವಸೆಯನ್ನು ಈಡೇರಿಸಿಲ್ಲ. ಇದು, ಜನರಿಗೆ ಮಾಡಿದ ದೊಡ್ಡ ವಂಚನೆ’ ಎಂದು ಟೀಕಿಸಿದರು.</p>.<p>‘2025ರ ವೇಳೆಗೆ ಯಮುನಾ ನದಿಯನ್ನು ಸ್ವಚ್ಛಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದರೆ, ಈಗ ಪರಿಸ್ಥಿತಿಯು ಇನ್ನಷ್ಟು ಹದಗೆಟ್ಟಿದೆ. ಪ್ರತಿಕೃತಿಯನ್ನು ಮುಳುಗಿಸುವ ಮೂಲಕ ಎಎಪಿ ವೈಫಲ್ಯವನ್ನು ಜನರ ಮುಂದಿಡುತ್ತಿದ್ದೇವೆ’ ಎಂದು ವರ್ಮಾ ಹೇಳಿದರು.</p>.<p>ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಅವರ ಅಧಿಕಾರವಧಿಯು ಕೇವಲ ಸುಳ್ಳು ಭರವಸೆ ನೀಡುವುದಕ್ಕೆ ಹಾಗೂ ನಿರಾಧಾರ ಪ್ರತಿಪಾದನೆಗಳಿಗೆ ಮಾತ್ರ ಸೀಮಿತವಾಗಿತ್ತು ಎಂದು ಆರೋಪಿಸಿದರು.</p>.<p><strong>‘ಆದ್ಯತೆ ಮೇರೆಗೆ ಒಳಚರಂಡಿ ಸಮಸ್ಯೆಗೆ ಪರಿಹಾರ’ </strong></p><p><strong>ನವದೆಹಲಿ</strong>: ‘ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಒಳಚರಂಡಿ ವ್ಯವಸ್ಥೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು’ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದರು. ಎಎಪಿ ಸರ್ಕಾರದ ಅಭಿವೃದ್ಧಿ ಸಾಧನೆಗಳ ವಿಡಿಯೊ ಸಂದೇಶದಲ್ಲಿ ಅವರು ‘ಸರ್ಕಾರ ಅನಧಿಕೃತ ಕಾಲೊನಿಗಳಿಗೆ ಮೂಲಸೌಕರ್ಯ ಕಲ್ಪಿಸಿ ಪರಿಸ್ಥಿತಿ ಸುಧಾರಿಸಿದೆ’ ಎಂದಿದ್ದಾರೆ. </p>.Delhi Polls| 11 ‘ಭ್ರಷ್ಟ’ರ ಪಟ್ಟಿಯಲ್ಲಿ ರಾಹುಲ್: ಪೋಸ್ಟರ್ ಬಿಡುಗಡೆ ಮಾಡಿದ AAP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಮುನಾ ನದಿ ಸ್ವಚ್ಛಗೊಳಿಸುವ ಭರವಸೆ ಈಡೇರಿಸಿಲ್ಲ’ ಎಂದು ಟೀಕಿಸಿರುವ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ, ಕೇಜ್ರಿವಾಲ್ ಪ್ರತಿಕೃತಿಯನ್ನು ನದಿಯಲ್ಲಿ ಮುಳುಗಿಸಿ ಶನಿವಾರ ಪ್ರತಿಭಟಿಸಿದರು.</p>.<p>ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ವರ್ಮಾ, ‘ಎಎಪಿ ಸರ್ಕಾರ ಸತತ 11 ವರ್ಷಗಳಿಂದ ಅಧಿಕಾರದಲ್ಲಿದೆ. ಸುಮಾರು ₹8000 ಕೋಟಿ ವ್ಯಯಿಸಿದೆ. ಆದರೆ, ನದಿ ಸ್ವಚ್ಛತೆಗೆ ಸಂಬಂಧಿಸಿದ ಭರವಸೆಯನ್ನು ಈಡೇರಿಸಿಲ್ಲ. ಇದು, ಜನರಿಗೆ ಮಾಡಿದ ದೊಡ್ಡ ವಂಚನೆ’ ಎಂದು ಟೀಕಿಸಿದರು.</p>.<p>‘2025ರ ವೇಳೆಗೆ ಯಮುನಾ ನದಿಯನ್ನು ಸ್ವಚ್ಛಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದರೆ, ಈಗ ಪರಿಸ್ಥಿತಿಯು ಇನ್ನಷ್ಟು ಹದಗೆಟ್ಟಿದೆ. ಪ್ರತಿಕೃತಿಯನ್ನು ಮುಳುಗಿಸುವ ಮೂಲಕ ಎಎಪಿ ವೈಫಲ್ಯವನ್ನು ಜನರ ಮುಂದಿಡುತ್ತಿದ್ದೇವೆ’ ಎಂದು ವರ್ಮಾ ಹೇಳಿದರು.</p>.<p>ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಅವರ ಅಧಿಕಾರವಧಿಯು ಕೇವಲ ಸುಳ್ಳು ಭರವಸೆ ನೀಡುವುದಕ್ಕೆ ಹಾಗೂ ನಿರಾಧಾರ ಪ್ರತಿಪಾದನೆಗಳಿಗೆ ಮಾತ್ರ ಸೀಮಿತವಾಗಿತ್ತು ಎಂದು ಆರೋಪಿಸಿದರು.</p>.<p><strong>‘ಆದ್ಯತೆ ಮೇರೆಗೆ ಒಳಚರಂಡಿ ಸಮಸ್ಯೆಗೆ ಪರಿಹಾರ’ </strong></p><p><strong>ನವದೆಹಲಿ</strong>: ‘ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಒಳಚರಂಡಿ ವ್ಯವಸ್ಥೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು’ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದರು. ಎಎಪಿ ಸರ್ಕಾರದ ಅಭಿವೃದ್ಧಿ ಸಾಧನೆಗಳ ವಿಡಿಯೊ ಸಂದೇಶದಲ್ಲಿ ಅವರು ‘ಸರ್ಕಾರ ಅನಧಿಕೃತ ಕಾಲೊನಿಗಳಿಗೆ ಮೂಲಸೌಕರ್ಯ ಕಲ್ಪಿಸಿ ಪರಿಸ್ಥಿತಿ ಸುಧಾರಿಸಿದೆ’ ಎಂದಿದ್ದಾರೆ. </p>.Delhi Polls| 11 ‘ಭ್ರಷ್ಟ’ರ ಪಟ್ಟಿಯಲ್ಲಿ ರಾಹುಲ್: ಪೋಸ್ಟರ್ ಬಿಡುಗಡೆ ಮಾಡಿದ AAP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>