ಕೊಚ್ಚಿ: ಕೇರಳ ಪೊಲೀಸರುಶಬರಿಮಲೆಯಲ್ಲಿ ಭಕ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿ ಸಲ್ಲಿಸಿದ ರಾಜ್ಯ ಬಿಜೆಪಿಗೆ ಹಿನ್ನಡೆಯಾಗಿದೆ. ಆಧಾರರಹಿತ ಆರೋಪ ಮಾಡಿದ್ದಕ್ಕೆ ಮತ್ತು ನ್ಯಾಯಾಲಯದ ಸಮಯ ವ್ಯರ್ಥಗೊಳಿಸಿದ್ದಕ್ಕೆ ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕೇರಳ ಹೈಕೋರ್ಟ್, ₹25,000 ದಂಡ ವಿಧಿಸಿದೆ.