ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ತುರಾತುರಿಯಲ್ಲಿ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆ ಪ್ರಶ್ನಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿವೆ. ಮೂವರು ನ್ಯಾಯಮೂರ್ತಿಗಳ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ನಡೆದಬಿಜೆಪಿ ಮುಖಂಡ ಸಂಜಯ್ ಕಾಕಡೆ ಮತ್ತು ಎನ್ಸಿಪಿ ಮುಖಂಡ ಶರದ್ ಪವಾರ್ ನಡುವಿನ ಭೇಟಿಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.