ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆಯಲ್ಲಿ ಸೋಲು: ಬಿಜೆಪಿ ರಾಜ್ಯ ಘಟಕಗಳ ಬದಲಾವಣೆ ಬಗ್ಗೆ ಮುಖಂಡರ ಚರ್ಚೆ

Published 7 ಜೂನ್ 2023, 4:34 IST
Last Updated 7 ಜೂನ್ 2023, 4:34 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ಪಕ್ಷದ ಕೆಲ ರಾಜ್ಯಗಳ ಘಟಕಗಳಲ್ಲಿ ಸಾಂಸ್ಥಿಕ ಬದಲಾವಣೆ ಮಾಡುವ ಕುರಿತು ಹಿರಿಯ ಮುಖಂಡರು ಚರ್ಚೆ ನಡೆಸಿದ್ದಾರೆ.

ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆ ನಡೆಸಿ ಚರ್ಚಿಸಿದ್ದಾರೆ. ‘ಜಾತಿ ಸಮೀಕರಣ ಮತ್ತು ಪಕ್ಷದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಬದಲಾವಣೆ ಆಗಲಿದೆ’ ಎಂದು ಸಾಂಸ್ಥಿಕ ಬದಲಾವಣೆ ಪ್ರಕ್ರಿಯೆ ಉಸ್ತುವಾರಿಯ ಪ್ರಮುಖರೊಬ್ಬರು ತಿಳಿಸಿದ್ದಾರೆ.

ಕರ್ನಾಟಕದ ಬಿಜೆಪಿ ಘಟಕದ ಅಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳಲ್ಲಿ ಬದಲಾವಣೆ ಆಗಲಿದೆ. ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯ ಘಟಕಗಳಲ್ಲಿಯೂ ಬದಲಾವಣೆ ಆಗಬಹುದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT