<p><strong>ಕೋಲ್ಕತ್ತ</strong>: ಪ್ರತೀಕಾರದ ರಾಜಕಾರಣಕ್ಕೆ ಪಶ್ಚಿಮ ಬಂಗಾಳದೊಳಗೆ ಪ್ರವೇಶವಿಲ್ಲ ಎಂದು ಹೇಳುವ ಮೂಲಕ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಪಶ್ಚಿಮ ಮೇದಿನಿಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿರುವ ಅವರು, 'ಬಿಜೆಪಿಯು ದಂಗೆಕೋರರ ಪಕ್ಷವಾಗಿದೆ. ಹಿಂಸೆ ಮತ್ತು ರಕ್ತಪಾತಗಳನ್ನು ನಾವು ಬಯಸುವುದಿಲ್ಲ. ಪ್ರತೀಕಾರದ ರಾಜಕಾರಣವನ್ನು ಬಂಗಾಳದೊಳಗೆ ಪ್ರವೇಶಿಸಲು ನಾವು ಬಿಡುವುದಿಲ್ಲ' ಎಂದು ತಿಳಿಸಿದ್ದಾರೆ.</p>.<p>'ಚುನಾವಣೆಯ ಸಮಯದಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ರಾಜ್ಯವು ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ ಅವರು ಗೈರಾಗಿದ್ದರು' ಎಂದು ಮಮತಾ ಹರಿಹಾಯ್ದಿದ್ದಾರೆ.</p>.<p>'ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ನಾಯಕರು ಹೆಲಿಕಾಪ್ಟರ್ಗಳು ಮತ್ತು ವಿಮಾನಗಳಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ. ಮತದಾರರಿಗೆ ಆಮಿಷವೊಡ್ಡಲು ಮತ್ತು ಮತಗಳನ್ನು ಲೂಟಿ ಮಾಡಲು ದುಡ್ಡು ತುಂಬಿದ ಚೀಲಗಳೊಂದಿಗೆ ಅವರು ಆಗಮಿಸುತ್ತಾರೆ' ಎಂದು ಟಿಎಂಸಿ ನಾಯಕಿ ಆರೋಪಿಸಿದ್ದಾರೆ.</p>.<p>'ಚಂಡಮಾರುತದ ಸಂತ್ರಸ್ತರಿಗಾಗಿ ಟಿಎಂಸಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿಗಳ ಪರಿಹಾರ ನೀಡಿತು. ನಾವು ಸಂಕಷ್ಟದಲ್ಲಿರುವ ಜನರಿಗಾಗಿ ಧಾವಿಸಿದೆವು. ಆಗ ಬಿಜೆಪಿ ನಾಯಕರು ಎಲ್ಲಿದ್ದರು? ಮನುಷ್ಯರು ನೋವು ಅನುಭವಿಸುತ್ತಿರುವ ಸಂದರ್ಭಗಳಲ್ಲಿ ಅವರು ಇರುವುದೇ ಇಲ್ಲ' ಎಂದು ಮಮತಾ ಟೀಕಿಸಿದ್ದಾರೆ.</p>.<p>294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪ್ರತೀಕಾರದ ರಾಜಕಾರಣಕ್ಕೆ ಪಶ್ಚಿಮ ಬಂಗಾಳದೊಳಗೆ ಪ್ರವೇಶವಿಲ್ಲ ಎಂದು ಹೇಳುವ ಮೂಲಕ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಪಶ್ಚಿಮ ಮೇದಿನಿಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಗುರುವಾರ ಮಾತನಾಡಿರುವ ಅವರು, 'ಬಿಜೆಪಿಯು ದಂಗೆಕೋರರ ಪಕ್ಷವಾಗಿದೆ. ಹಿಂಸೆ ಮತ್ತು ರಕ್ತಪಾತಗಳನ್ನು ನಾವು ಬಯಸುವುದಿಲ್ಲ. ಪ್ರತೀಕಾರದ ರಾಜಕಾರಣವನ್ನು ಬಂಗಾಳದೊಳಗೆ ಪ್ರವೇಶಿಸಲು ನಾವು ಬಿಡುವುದಿಲ್ಲ' ಎಂದು ತಿಳಿಸಿದ್ದಾರೆ.</p>.<p>'ಚುನಾವಣೆಯ ಸಮಯದಲ್ಲಿ ಮತದಾರರಿಗೆ ಹಣದ ಆಮಿಷ ಒಡ್ಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ರಾಜ್ಯವು ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ ಅವರು ಗೈರಾಗಿದ್ದರು' ಎಂದು ಮಮತಾ ಹರಿಹಾಯ್ದಿದ್ದಾರೆ.</p>.<p>'ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ನಾಯಕರು ಹೆಲಿಕಾಪ್ಟರ್ಗಳು ಮತ್ತು ವಿಮಾನಗಳಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ. ಮತದಾರರಿಗೆ ಆಮಿಷವೊಡ್ಡಲು ಮತ್ತು ಮತಗಳನ್ನು ಲೂಟಿ ಮಾಡಲು ದುಡ್ಡು ತುಂಬಿದ ಚೀಲಗಳೊಂದಿಗೆ ಅವರು ಆಗಮಿಸುತ್ತಾರೆ' ಎಂದು ಟಿಎಂಸಿ ನಾಯಕಿ ಆರೋಪಿಸಿದ್ದಾರೆ.</p>.<p>'ಚಂಡಮಾರುತದ ಸಂತ್ರಸ್ತರಿಗಾಗಿ ಟಿಎಂಸಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿಗಳ ಪರಿಹಾರ ನೀಡಿತು. ನಾವು ಸಂಕಷ್ಟದಲ್ಲಿರುವ ಜನರಿಗಾಗಿ ಧಾವಿಸಿದೆವು. ಆಗ ಬಿಜೆಪಿ ನಾಯಕರು ಎಲ್ಲಿದ್ದರು? ಮನುಷ್ಯರು ನೋವು ಅನುಭವಿಸುತ್ತಿರುವ ಸಂದರ್ಭಗಳಲ್ಲಿ ಅವರು ಇರುವುದೇ ಇಲ್ಲ' ಎಂದು ಮಮತಾ ಟೀಕಿಸಿದ್ದಾರೆ.</p>.<p>294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>