<p><strong>ಅಮರಾವತಿ, ಆಂಧ್ರಪ್ರದೇಶ:</strong> ಬಿಜೆಪಿ ನಾಯಕರು ಸೋಮವಾರ ಇಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದು, ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಎನ್ಎಡಿ ಮೈತ್ರಿಕೂಟದ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿದರು.</p>.<p>ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಅವರು ಉಭಯ ನಾಯಕರನ್ನು ಭೇಟಿಯಾಗಿದ್ದರು ಎಂದು ಟಿಡಿಪಿ ಮೂಲಗಳು ತಿಳಿಸಿವೆ.</p>.<p>ಈಗಾಗಲೇ ಅಂತಿಮಗೊಂಡಂತೆ ಕ್ಷೇತ್ರಗಳ ಸಂಖ್ಯೆ ನಿಗದಿಯಾಗಿದೆ. ಈಗ ಮೈತ್ರಿಪಕ್ಷಗಳು ಸ್ಪರ್ಧಿಸಬೇಕಾದ ಕ್ಷೇತ್ರಗಳ ಚರ್ಚೆ ನಡೆದಿದೆ. ಚರ್ಚೆ ಪ್ರಕಾರ, ಬಿಜೆಪಿ ಲೋಕಸಭೆಯ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರ ಮತ್ತು ಯಾರು ಸ್ಪರ್ಧಿಸಬೇಕು ಎಂಬುದನ್ನು ಆ ಪಕ್ಷದ ಮುಖಂಡರು ಅಂತಿಮಗೊಳಿಸುವರು ಎಂದು ವಿವರಿಸಿವೆ.</p>.<p>ಮೈತ್ರಿ ಪ್ರಕಾರ, ಬಿಜೆಪಿ ತಲಾ ಆರು ಲೋಕಸಭೆ, ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಜನಸೇನಾ ಪಕ್ಷ ವಿಧಾನಸಭೆಯ 24, ಲೋಕಸಭೆಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಟಿಡಿಪಿಯು ವಿಧಾನಸಭೆಯ 145, ಲೋಕಸಭೆಯ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಆಂಧ್ರದಲ್ಲಿ ಲೋಕಸಭೆಯ 25 ಕ್ಷೇತ್ರಗಳು, ವಿಧಾನಸಭೆಯ 175 ಕ್ಷೇತ್ರಗಳಿವೆ.</p>.<p>ಮಾರ್ಚ್ 17–20ರ ಅವಧಿಯಲ್ಲಿ ಆಂಧ್ರದಲ್ಲಿ ಚುನಾವಣಾ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಆ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ, ಆಂಧ್ರಪ್ರದೇಶ:</strong> ಬಿಜೆಪಿ ನಾಯಕರು ಸೋಮವಾರ ಇಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದು, ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಎನ್ಎಡಿ ಮೈತ್ರಿಕೂಟದ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿದರು.</p>.<p>ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಅವರು ಉಭಯ ನಾಯಕರನ್ನು ಭೇಟಿಯಾಗಿದ್ದರು ಎಂದು ಟಿಡಿಪಿ ಮೂಲಗಳು ತಿಳಿಸಿವೆ.</p>.<p>ಈಗಾಗಲೇ ಅಂತಿಮಗೊಂಡಂತೆ ಕ್ಷೇತ್ರಗಳ ಸಂಖ್ಯೆ ನಿಗದಿಯಾಗಿದೆ. ಈಗ ಮೈತ್ರಿಪಕ್ಷಗಳು ಸ್ಪರ್ಧಿಸಬೇಕಾದ ಕ್ಷೇತ್ರಗಳ ಚರ್ಚೆ ನಡೆದಿದೆ. ಚರ್ಚೆ ಪ್ರಕಾರ, ಬಿಜೆಪಿ ಲೋಕಸಭೆಯ 6 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರ ಮತ್ತು ಯಾರು ಸ್ಪರ್ಧಿಸಬೇಕು ಎಂಬುದನ್ನು ಆ ಪಕ್ಷದ ಮುಖಂಡರು ಅಂತಿಮಗೊಳಿಸುವರು ಎಂದು ವಿವರಿಸಿವೆ.</p>.<p>ಮೈತ್ರಿ ಪ್ರಕಾರ, ಬಿಜೆಪಿ ತಲಾ ಆರು ಲೋಕಸಭೆ, ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಜನಸೇನಾ ಪಕ್ಷ ವಿಧಾನಸಭೆಯ 24, ಲೋಕಸಭೆಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಟಿಡಿಪಿಯು ವಿಧಾನಸಭೆಯ 145, ಲೋಕಸಭೆಯ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಆಂಧ್ರದಲ್ಲಿ ಲೋಕಸಭೆಯ 25 ಕ್ಷೇತ್ರಗಳು, ವಿಧಾನಸಭೆಯ 175 ಕ್ಷೇತ್ರಗಳಿವೆ.</p>.<p>ಮಾರ್ಚ್ 17–20ರ ಅವಧಿಯಲ್ಲಿ ಆಂಧ್ರದಲ್ಲಿ ಚುನಾವಣಾ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಆ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>