<p><strong>ಪೌಡೀ (ಉತ್ತರಾಖಂಡ):</strong> ರೆಸಾರ್ಟ್ ಸ್ವಾಗತಕಾರಿಣಿಯ ಹತ್ಯೆ ಆರೋಪದಲ್ಲಿ ಹರಿದ್ವಾರ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಳಕಿತ್ ಆರ್ಯ ಸೇರಿದಂತೆ ಮೂವರನ್ನು ಉತ್ತರಾಖಂಡ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಪುಳಕಿತ್ ಆರ್ಯ ಅವರ ಮಾಲೀಕತ್ವದ ರೆಸಾರ್ಟ್ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಕಾಲುವೆಯೊಂದರಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p><a href="https://www.prajavani.net/entertainment/tv/kiccha-sudeep-kannada-bigg-boss-kannada-9-contestants-names-and-more-updates-974460.html" itemprop="url">ನಾಳೆ ಬಿಗ್ಬಾಸ್ ಮನೆ ಪ್ರವೇಶಿಸಲಿದ್ದಾರೆ 18 ಸ್ಪರ್ಧಿಗಳು: ಇಲ್ಲಿದೆ ವಿವರ </a></p>.<p>ಬಂಧಿತ ಇನ್ನಿಬ್ಬರನ್ನು ರೆಸಾರ್ಟ್ ವ್ಯವಸ್ಥಾಪಕ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಎಂದು ಗುರುತಿಸಲಾಗಿದೆ.</p>.<p>ಯುವತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಕಾಲುವೆಗೆ ಎಸೆದಿದ್ದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೌಡೀ ಎಎಸ್ಪಿ ಶೇಖರ್ ಚಂದ್ರ ಸೂಯಲ್ ಮಾಹಿತಿ ನೀಡಿದ್ದಾರೆ.</p>.<p>ಆರಂಭದಲ್ಲಿ ಆರೋಪಿಗಳು ಪೊಲೀಸರನ್ನು ತಪ್ಪುದಾರಿಗೆಳೆಯಲು ಯತ್ನಿಸಿದ್ದರು. ಆಮೇಲೆ ತಪ್ಪೊಪ್ಪಿಕೊಂಡರು ಎಂದು ಎಎಸ್ಪಿ ಹೇಳಿದ್ದಾರೆ.</p>.<p><a href="https://www.prajavani.net/karnataka-news/details-handing-over-to-pm-modi-on-irregularities-in-then-bms-trust-says-hd-kumaraswamy-974451.html" itemprop="url">ಪ್ರಧಾನಿ ಮೋದಿಗೆ ಕಡತ ಕಳುಹಿಸುತ್ತೇನೆ: ಎಚ್.ಡಿ.ಕುಮಾರಸ್ವಾಮಿ </a></p>.<p>ಯುವತಿಯ ಪತ್ತೆಗಾಗಿ ಪೊಲೀಸರ ತಂಡವನ್ನು ನಿಯೋಜಿಸಲಾಗಿತ್ತು. 24 ಗಂಟೆಯೊಳಗೆ ಇಡೀ ಪ್ರಕರಣವನ್ನು ಬಯಲಿಗೆಳೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಬಂಧಿತರನ್ನು ಪೌಡೀಯ ಕೋಟ್ದ್ವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೆವು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ.</p>.<p>ಬಿಜೆಪಿ ನಾಯಕ ವಿನೋದ್ ಆರ್ಯ ಅವರು ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಆದರೆ ಸರ್ಕಾರದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲ.</p>.<p><a href="https://www.prajavani.net/entertainment/cinema/my-face-used-in-congress-campaign-without-consent-says-actor-akhil-threatens-action-974521.html" itemprop="url">‘40% ಸರ್ಕಾರ’ ಅಭಿಯಾನಕ್ಕೆ ಅನುಮತಿ ಇಲ್ಲದೇ ನನ್ನ ಫೋಟೊ ಬಳಸಿದೆ ಕಾಂಗ್ರೆಸ್: ನಟ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೌಡೀ (ಉತ್ತರಾಖಂಡ):</strong> ರೆಸಾರ್ಟ್ ಸ್ವಾಗತಕಾರಿಣಿಯ ಹತ್ಯೆ ಆರೋಪದಲ್ಲಿ ಹರಿದ್ವಾರ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಳಕಿತ್ ಆರ್ಯ ಸೇರಿದಂತೆ ಮೂವರನ್ನು ಉತ್ತರಾಖಂಡ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಪುಳಕಿತ್ ಆರ್ಯ ಅವರ ಮಾಲೀಕತ್ವದ ರೆಸಾರ್ಟ್ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಕಾಲುವೆಯೊಂದರಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p><a href="https://www.prajavani.net/entertainment/tv/kiccha-sudeep-kannada-bigg-boss-kannada-9-contestants-names-and-more-updates-974460.html" itemprop="url">ನಾಳೆ ಬಿಗ್ಬಾಸ್ ಮನೆ ಪ್ರವೇಶಿಸಲಿದ್ದಾರೆ 18 ಸ್ಪರ್ಧಿಗಳು: ಇಲ್ಲಿದೆ ವಿವರ </a></p>.<p>ಬಂಧಿತ ಇನ್ನಿಬ್ಬರನ್ನು ರೆಸಾರ್ಟ್ ವ್ಯವಸ್ಥಾಪಕ ಸೌರಭ್ ಭಾಸ್ಕರ್ ಮತ್ತು ಸಹಾಯಕ ವ್ಯವಸ್ಥಾಪಕ ಅಂಕಿತ್ ಗುಪ್ತಾ ಎಂದು ಗುರುತಿಸಲಾಗಿದೆ.</p>.<p>ಯುವತಿಯನ್ನು ಹತ್ಯೆ ಮಾಡಿ ಮೃತದೇಹವನ್ನು ಕಾಲುವೆಗೆ ಎಸೆದಿದ್ದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೌಡೀ ಎಎಸ್ಪಿ ಶೇಖರ್ ಚಂದ್ರ ಸೂಯಲ್ ಮಾಹಿತಿ ನೀಡಿದ್ದಾರೆ.</p>.<p>ಆರಂಭದಲ್ಲಿ ಆರೋಪಿಗಳು ಪೊಲೀಸರನ್ನು ತಪ್ಪುದಾರಿಗೆಳೆಯಲು ಯತ್ನಿಸಿದ್ದರು. ಆಮೇಲೆ ತಪ್ಪೊಪ್ಪಿಕೊಂಡರು ಎಂದು ಎಎಸ್ಪಿ ಹೇಳಿದ್ದಾರೆ.</p>.<p><a href="https://www.prajavani.net/karnataka-news/details-handing-over-to-pm-modi-on-irregularities-in-then-bms-trust-says-hd-kumaraswamy-974451.html" itemprop="url">ಪ್ರಧಾನಿ ಮೋದಿಗೆ ಕಡತ ಕಳುಹಿಸುತ್ತೇನೆ: ಎಚ್.ಡಿ.ಕುಮಾರಸ್ವಾಮಿ </a></p>.<p>ಯುವತಿಯ ಪತ್ತೆಗಾಗಿ ಪೊಲೀಸರ ತಂಡವನ್ನು ನಿಯೋಜಿಸಲಾಗಿತ್ತು. 24 ಗಂಟೆಯೊಳಗೆ ಇಡೀ ಪ್ರಕರಣವನ್ನು ಬಯಲಿಗೆಳೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಬಂಧಿತರನ್ನು ಪೌಡೀಯ ಕೋಟ್ದ್ವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೆವು. ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ.</p>.<p>ಬಿಜೆಪಿ ನಾಯಕ ವಿನೋದ್ ಆರ್ಯ ಅವರು ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಆದರೆ ಸರ್ಕಾರದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲ.</p>.<p><a href="https://www.prajavani.net/entertainment/cinema/my-face-used-in-congress-campaign-without-consent-says-actor-akhil-threatens-action-974521.html" itemprop="url">‘40% ಸರ್ಕಾರ’ ಅಭಿಯಾನಕ್ಕೆ ಅನುಮತಿ ಇಲ್ಲದೇ ನನ್ನ ಫೋಟೊ ಬಳಸಿದೆ ಕಾಂಗ್ರೆಸ್: ನಟ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>