ಪೌಡೀ (ಉತ್ತರಾಖಂಡ): ರೆಸಾರ್ಟ್ ಸ್ವಾಗತಕಾರಿಣಿಯ ಹತ್ಯೆ ಆರೋಪದಲ್ಲಿ ಹರಿದ್ವಾರ ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಮಗ ಪುಳಕಿತ್ ಆರ್ಯ ಸೇರಿದಂತೆ ಮೂವರನ್ನು ಉತ್ತರಾಖಂಡ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಪುಳಕಿತ್ ಆರ್ಯ ಅವರ ಮಾಲೀಕತ್ವದ ರೆಸಾರ್ಟ್ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಕಾಲುವೆಯೊಂದರಲ್ಲಿ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.