<p><strong>ನವದೆಹಲಿ</strong>: ‘ಚುನಾವಣೆ ಲಾಭಕ್ಕಾಗಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಬಿಜೆಪಿಯು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಮುಂದೆ ಚುನಾವಣೆಗಳಿಗೆ ಜಾರಿಗೊಳಿಸುವ ಮಾದರಿ ನೀತಿ ಸಂಹಿತೆಯಲ್ಲಿ ಇದರ ವಿರುದ್ಧ ಎಚ್ಚರಿಕೆಯನ್ನು ಸೇರಿಸಬೇಕು’ ಎಂದು ಸಿಪಿಎಂ ಪಕ್ಷ ಒತ್ತಾಯಿಸಿದೆ.</p><p>ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್, ವಿವೇಕ್ ಜೋಶಿ ಅವರನ್ನು ಭೇಟಿಯಾಗಿದ್ದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ಮತ್ತು ಮುಖಂಡರಾದ ನಿಲೊಟ್ಪಲ್ ಬಸು ಮತ್ತು ಮುರಳೀಧರನ್ ಅವರು ಈ ಕುರಿತು ಗಮನಸೆಳೆದರು. </p><p>ಭೇಟಿ ಸಂದರ್ಭದಲ್ಲಿ ಸಿಪಿಎಂ ನಾಯಕರು ಆಯೋಗಕ್ಕೆ 11 ಪುಟಗಳ ಮನವಿಯನ್ನೂ ಸಲ್ಲಿಸಿದರು. ಚುನಾವಣಾ ಪ್ರಚಾರದ ಭಾಗಶಃ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂಬುದೂ ಇದರಲ್ಲಿ ಸೇರಿದೆ. ಅಲ್ಲದೆ, ಚುನಾವಣೆ ಭರವಸೆಯಾಗಿ ಆರ್ಥಿಕ ಯೋಜನೆ ಪ್ರಕಟಿಸುವ ನಡೆಗೆ ವಿರೋಧ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಚುನಾವಣೆ ಲಾಭಕ್ಕಾಗಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಬಿಜೆಪಿಯು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಮುಂದೆ ಚುನಾವಣೆಗಳಿಗೆ ಜಾರಿಗೊಳಿಸುವ ಮಾದರಿ ನೀತಿ ಸಂಹಿತೆಯಲ್ಲಿ ಇದರ ವಿರುದ್ಧ ಎಚ್ಚರಿಕೆಯನ್ನು ಸೇರಿಸಬೇಕು’ ಎಂದು ಸಿಪಿಎಂ ಪಕ್ಷ ಒತ್ತಾಯಿಸಿದೆ.</p><p>ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್, ವಿವೇಕ್ ಜೋಶಿ ಅವರನ್ನು ಭೇಟಿಯಾಗಿದ್ದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ಮತ್ತು ಮುಖಂಡರಾದ ನಿಲೊಟ್ಪಲ್ ಬಸು ಮತ್ತು ಮುರಳೀಧರನ್ ಅವರು ಈ ಕುರಿತು ಗಮನಸೆಳೆದರು. </p><p>ಭೇಟಿ ಸಂದರ್ಭದಲ್ಲಿ ಸಿಪಿಎಂ ನಾಯಕರು ಆಯೋಗಕ್ಕೆ 11 ಪುಟಗಳ ಮನವಿಯನ್ನೂ ಸಲ್ಲಿಸಿದರು. ಚುನಾವಣಾ ಪ್ರಚಾರದ ಭಾಗಶಃ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂಬುದೂ ಇದರಲ್ಲಿ ಸೇರಿದೆ. ಅಲ್ಲದೆ, ಚುನಾವಣೆ ಭರವಸೆಯಾಗಿ ಆರ್ಥಿಕ ಯೋಜನೆ ಪ್ರಕಟಿಸುವ ನಡೆಗೆ ವಿರೋಧ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>